ಬ್ರೇಕಿಂಗ್ ನ್ಯೂಸ್
30-05-23 10:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಂಗಳವಾರ ನೀರಾವರಿ ಇಲಾಖೆಯ ಸಭೆಯನ್ನು ಕರೆದು ಮೇಕೆದಾಟು ಯೋಜನೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
ಚುನಾವಣೆಗೂ ಮುನ್ನ ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿ, ಈಗ ಮತ್ತೆ ಯೋಜನೆ ಬಗ್ಗೆ ಮಾತನಾಡಿರುವುದು ಮಹತ್ವ ಪಡೆದಿದೆ. ಮೇಕೆದಾಟು ಯೋಜನೆ ಅನುಷ್ಠಾನಗೊಂಡರೆ ಬೆಂಗಳೂರಿನ ನೀರಿನ ಬವಣೆಗೆ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡು ಯೋಜನೆ ವಿರುದ್ಧ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯುಎಂಎ) ಈ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿತ್ತು. ಈ ಯೋಜನೆಗೆ ರೂ. 9,000 ಕೋಟಿ (2019 ದರಗಳು) ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. 'ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ' ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಕರ್ನಾಟಕಕ್ಕೆ ಹಂಚಿಕೆಯಾದ ಹೆಚ್ಚುವರಿ 4.75 ಟಿಎಂಸಿ ಅಡಿ ನೀರನ್ನು ಬಳಸಿಕೊಳ್ಳಲು ಈ ಯೋಜನೆ ಅವಕಾಶ ನೀಡಲಿದೆ.
67.16 ಟಿಎಂಸಿ ಅಡಿ ನೀರನ್ನು ಸಂಗ್ರಹಿಸಲು ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಲಾಗುತ್ತದೆ. 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಯುನಿಟ್ಗಳನ್ನು ನಿರ್ಮಿಸಬೇಕಿದೆ. ಇತರ ಮೂಲಸೌಕರ್ಯಗಳು, ನೀರನ್ನು ಎತ್ತುವ ಜಾಕ್ವೆಲ್- ಕಮ್- ಪಂಪ್ಹೌಸ್ಗಳ ನಿರ್ಮಾಣ ಯೋಜನೆಯ ಪ್ರಮುಖ ಅಂಶಗಳಾಗಿವೆ. ಯೋಜನೆಗೆ ಒಟ್ಟು 12,979 ಎಕರೆ ಭೂಮಿ ಅಗತ್ಯವಿದ್ದರೆ, ಇದರಲ್ಲಿ 12,345.4 ಎಕರೆ ಮುಳುಗಡೆಯಾಗಲಿದೆ. 500 ಎಕರೆ ಕಂದಾಯ ಭೂಮಿಯನ್ನು ಉಳಿಸಿಕೊಳ್ಳಲಾಗುತ್ತದೆ. ನೀರು ಪಾಲಾಗುವ ಉಳಿದ ಜಮೀನು ಪರಿಸರ ಸೂಕ್ಷ್ಮ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಸುತ್ತಮುತ್ತಲಿನ ಅರಣ್ಯಗಳಿಗೆ ಸೇರಿದೆ.
ವನ್ಯಜೀವಿಗಳ ಆವಾಸಸ್ಥಾನವು ಕುಗ್ಗುತ್ತಿರುವ ಸಮಯದಲ್ಲಿ ಸಂರಕ್ಷಿತ ಪ್ರದೇಶದ ದೊಡ್ಡ ಪ್ರದೇಶಗಳನ್ನು ಮುಳುಗಿಸುವುದು ವನ್ಯಜೀವಿ ಸಂಕುಲಕ್ಕೆ ಸಂಕಷ್ಟವನ್ನು ತಂದೊಡ್ಡಲಿದೆ ಎಂದು ಪರಿಸರ ತಜ್ಞರು ಎಚ್ಚರಿಸಿದ್ದಾರೆ.
The Mekedatu project, one of the first issues the Congress raised to garner support for the elections, is back in the spotlight with Deputy Chief Minister D K Shivakumar, who holds the Water Resources portfolio, calling a meeting of the irrigation department on Tuesday.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm