Odisha Express Train Accident Update: ರೈಲು ಅಪಘಾತ ; ಕನ್ನಡಿಗರಿಗೆ ಸಹಾಯವಾಣಿ ಆರಂಭ, ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧ ಎಂದು ಸಿಎಂ ಟ್ವೀಟ್ 

03-06-23 02:04 pm       Bangalore Correspondent   ಕರ್ನಾಟಕ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಅಗತ್ಯ ನೆರವು ನೀಡಲು ಹಾಗೂ ಸುರಕ್ಷತೆಯ ಮಾಹಿತಿ ಒದಗಿಸಲು ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.

ಬೆಂಗಳೂರು, ಜೂ 3: ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಅಗತ್ಯ ನೆರವು ನೀಡಲು ಹಾಗೂ ಸುರಕ್ಷತೆಯ ಮಾಹಿತಿ ಒದಗಿಸಲು ರಾಜ್ಯ ತುರ್ತು ನಿರ್ವಹಣಾ ಕೇಂದ್ರ (SEOC)ದಲ್ಲಿ ನಾಗರೀಕರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.

ದೂರವಾಣಿ ಸಂಖ್ಯೆ: 1070, 080-22253707, 080-22340676 ಕ್ಕೆ ಕರೆಮಾಡಿ ಮಾಹಿತಿ ಅಥವಾ ನೆರವು ಪಡೆಯಲು ಕೋರಲಾಗಿದೆ. ಶುಕ್ರವಾರ ರಾತ್ರಿ ಓಡಿಶಾದ ಬಾಲಸೋರ್ ರೈಲು ಅಪಘಾತ ಘಟನೆಯಲ್ಲಿ ಕನ್ನಡಿಗರ ಸುರಕ್ಷತೆಗಾಗಿ ಸಚಿವ ಸಂತೋಷ್ ಲಾಡ್ ನೇತೃತ್ವದ ತಂಡವನ್ನು ನಿಯೋಜಿಸಿದೆ.

ಮುಖ್ಯಮಂತ್ರಿಗಳು ಮುಖ್ಯ ಕಾರ್ಯದರ್ಶಿಯವರಿಂದ ವರದಿಯನ್ನು ಕೇಳಿದ್ದು, ಕನ್ನಡಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಅವರಿಗೆ ಅಗತ್ಯವಿರುವ ಎಲ್ಲ ಬೆಂಬಲವನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಡಿಶಾದ ಬಾಲಾಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟ ಸುದ್ದಿ ಕೇಳಿ ಅತೀವ ನೋವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಗಾಯಗೊಂಡಿರುವವರೆಲ್ಲರೂ ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಈ ಮೊದಲು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

Karnataka CM Siddaramaiah grieved by Odisha train accident, helpline number for kannadigas launched. He also tweeted stating we will be responsible to get back even a single kanmadiga safely from the place of accident in Odisha.