ಬ್ರೇಕಿಂಗ್ ನ್ಯೂಸ್
04-06-23 03:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.
ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.
ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್ ಬಳಿ ಟಿಕೆಟ್ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.
Free bus travel for women in karnataka, women should carry ticket compulsory.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 09:12 pm
Mangalore Correspondent
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm