ಬ್ರೇಕಿಂಗ್ ನ್ಯೂಸ್
04-06-23 03:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
![]()

ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.
ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.
ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್ ಬಳಿ ಟಿಕೆಟ್ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.
Free bus travel for women in karnataka, women should carry ticket compulsory.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm