ಬ್ರೇಕಿಂಗ್ ನ್ಯೂಸ್
04-06-23 03:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 4: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆ ಮಹಿಳೆಯರಿಗೆ ಉಚಿತ ಸಾರಿಗೆ ಪ್ರಯಾಣ ಇದೇ ಜೂನ್ 11ರಂದು ಜಾರಿಗೆ ಬರುತ್ತಿದೆ. ಅಂದು ಸಿಎಂ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗೆ ಚಾಲನೆ ನೀಡುವುದರೊಂದಿಗೆ ಸರ್ಕಾರಿ ಬಸ್ ಉಚಿತ ಸೌಲಭ್ಯದ ಯೋಜನೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
![]()

ಅಂದಿನಿಂದ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಇದಕ್ಕೆ ಕೆಲವು ಷರತ್ತುಗಳನ್ನು ಹಾಕಿದೆ. ಉಚಿತ ಬಸ್ ಸೇವೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಾಜ್ಯದ ಒಳಗೆ ಮಾತ್ರ ಮಹಿಳೆಯರಿಗೆ ಉಚಿತ ಬಸ್ ವ್ಯವಸ್ಥೆ ಇರುತ್ತದೆ. ಎಕ್ಸ್ಪ್ರೆಸ್ ಬಸ್ನಲ್ಲಿಯೂ ಪ್ರಯಾಣಕ್ಕೆ ಅವಕಾಶ ಮಾಡಲಾಗುತ್ತದೆ. ಬೆಂಗಳೂರು ನಗರದ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ನಲ್ಲಿ ಅವಕಾಶ ಇರಲಿದೆ. ಎಸಿ ಮತ್ತು ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣವಿಲ್ಲ. ರಾಜಹಂಸ ಬಸ್ನಲ್ಲಿಯೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ.
ಇದೇ ವೇಳೆ, ಮಹಿಳೆಯರು ಉಚಿತ ಪ್ರಯಾಣಕ್ಕೆ ಟಿಕೆಟ್ ಪಡೆಯಬೇಕೋ, ಇಲ್ಲವೋ.. ಅದಕ್ಕಾಗಿ ಯಾವ ರೀತಿಯ ದಾಖಲೆ ಹಾಜರುಪಡಿಸಬೇಕು ಎಂಬ ಗೊಂದಲಗಳಿದ್ದವು. ಈ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಮಹಿಳೆಯರು ಪ್ರಯಾಣಕ್ಕೂ ಮೊದಲು ಕಂಡಕ್ಟರ್ ಬಳಿ ಟಿಕೆಟ್ ಪಡೆಯಲೇಬೇಕು. ಮಹಿಳೆಯರಿಗೆ ಉಚಿತ ಪ್ರಯಾಣದ ಟಿಕೆಟ್- ಶಕ್ತಿ ಯೋಜನೆ ಎಂದು ನಮೂದಿಸಿರುವ ಟಿಕೆಟ್ ಚೀಟಿಯನ್ನು ಪ್ರಯಾಣಿಕರಿಗೆ ನೀಡಲಿದ್ದಾರೆ.
ಟಿಕೆಟ್ ಮೇಲೆ 'ಮಹಿಳಾ ಪ್ರಯಾಣಿಕರ ಉಚಿತ ಚೀಟಿ- ಶಕ್ತಿ ಯೋಜನೆ' ಎಂದು ಬರೆದಿರುತ್ತಾರೆ ಮತ್ತು ಟಿಕೆಟ್ನಲ್ಲಿ ಯಾವುದೇ ಬೆಲೆ ನಮೂದಾಗುವುದಿಲ್ಲ. ಮಾಮೂಲಿಯಂತೆ ಕಂಡಕ್ಟರ್ ಬಳಿ ಟಿಕೆಟ್ ಪಡೆದುಕೊಳ್ಳಬೇಕು. ಬದಲಾವಣೆ ಏನೆಂದರೆ, ಹಣ ಕೊಡುವಂತಿಲ್ಲ. ಇದಕ್ಕಾಗಿ ಬಿಎಂಟಿಸಿ ಮತ್ತು ಕೆಎಸ್ಸಾರ್ಟಿಸಿ ಸಿದ್ಧತೆ ನಡೆಸುತ್ತಿದೆ.
Free bus travel for women in karnataka, women should carry ticket compulsory.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm