ಬ್ರೇಕಿಂಗ್ ನ್ಯೂಸ್
06-06-23 11:25 am HK News Desk ಕರ್ನಾಟಕ
ಯಾದಗಿರಿ, ಜೂನ್ 6: ಮಂಗಳವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಐದು ಜನ ಸಾವನ್ನಪ್ಪಿದ್ದು, 13 ಜನ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ.
ಮೃತರನ್ನು ರಮಿಜಾ ಬೇಗಂ (50), ಮುನೀರ್ (40), ನಯಾಮತ್ (40), ಮುದಸ್ಸೀರ್ (12) ಮತ್ತು ಸುಮ್ಮಿ (12) ಎಂದು ಗುರುತಿಸಲಾಗಿದೆ. ಮೃತರೆಲ್ಲಾ ಆಂಧ್ರ ಪ್ರದೇಶದ ಮೂಲದವರು ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ಮುನೀರ್ ಹಾಗೂ ಮುದಸ್ಸೀರ್ ಇಬ್ಬರೂ ತಂದೆ-ಮಗ ಎನ್ನಲಾಗಿದ್ದು, ಇನ್ನುಳಿದ ಮೂವರು ವೆಲಗುಡ ಗ್ರಾಮದವರು ಎಂದು ತಿಳಿದುಬಂದಿದೆ.
ಕ್ರೂಸರ್ನಲ್ಲಿದ್ದ ಜನರು ಆಂಧ್ರಪ್ರದೇಶದ ನಂದ್ಯಾಳ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಳಿಚಕ್ರ ಬಳಿ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೇ ಐವರು ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಸೈದಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಐವರು ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ರಸ್ತೆ ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಮತ್ತು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದೆ. ಮೇ 28ರಂದು ಕುಷ್ಟಗಿ ಸಮೀಪದ ಕಲಕೇರಿ ಬಳಿ ಭೀಕರ ರಸ್ತೆ ಅಪಘಾತ ನಡೆದಿತ್ತು. ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಮೇ 29ರಂದು ಮೈಸೂರಿನ ಟಿ ನರಸೀಪುರ ಸಮೀಪದ ಕುರುಬೂರು ಬಳಿ ಭೀಕರ ರಸ್ತೆ ಅಫಘಾತ ಸಂಭವಿಸಿತ್ತು. ಬಸ್ಗೆ ಕಾರು ಡಿಕ್ಕಿ ಹೊಡೆದು ಬಳ್ಳಾರಿ ಮೂಲದ 11 ಜನ ಸಾವನ್ನಪ್ಪಿದ್ದರು.
As many as five people, including two children, were killed in a road accident near Balichakra village in Yadgir district in Karnataka on June 6 morning. 13 others were injured in the accident and were rushed to YIMS.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm