ಬ್ರೇಕಿಂಗ್ ನ್ಯೂಸ್
06-06-23 11:25 am HK News Desk ಕರ್ನಾಟಕ
ಯಾದಗಿರಿ, ಜೂನ್ 6: ಮಂಗಳವಾರ ನಸುಕಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಐದು ಜನ ಸಾವನ್ನಪ್ಪಿದ್ದು, 13 ಜನ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಎ)ನಲ್ಲಿ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ನಡೆದಿದೆ.
ಮೃತರನ್ನು ರಮಿಜಾ ಬೇಗಂ (50), ಮುನೀರ್ (40), ನಯಾಮತ್ (40), ಮುದಸ್ಸೀರ್ (12) ಮತ್ತು ಸುಮ್ಮಿ (12) ಎಂದು ಗುರುತಿಸಲಾಗಿದೆ. ಮೃತರೆಲ್ಲಾ ಆಂಧ್ರ ಪ್ರದೇಶದ ಮೂಲದವರು ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ಮುನೀರ್ ಹಾಗೂ ಮುದಸ್ಸೀರ್ ಇಬ್ಬರೂ ತಂದೆ-ಮಗ ಎನ್ನಲಾಗಿದ್ದು, ಇನ್ನುಳಿದ ಮೂವರು ವೆಲಗುಡ ಗ್ರಾಮದವರು ಎಂದು ತಿಳಿದುಬಂದಿದೆ.
ಕ್ರೂಸರ್ನಲ್ಲಿದ್ದ ಜನರು ಆಂಧ್ರಪ್ರದೇಶದ ನಂದ್ಯಾಳ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬಳಿಚಕ್ರ ಬಳಿ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲಿಯೇ ಐವರು ಸಾವಿಗೀಡಾಗಿದ್ದಾರೆ.

ಸ್ಥಳಕ್ಕೆ ಸೈದಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಐವರು ಪೈಕಿ ಇಬ್ಬರು ಮಹಿಳೆಯರು ಸೇರಿದ್ದಾರೆ. ರಸ್ತೆ ಅಪಘಾತದಲ್ಲಿ 13 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಮತ್ತು ರಾಯಚೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದೆ. ಮೇ 28ರಂದು ಕುಷ್ಟಗಿ ಸಮೀಪದ ಕಲಕೇರಿ ಬಳಿ ಭೀಕರ ರಸ್ತೆ ಅಪಘಾತ ನಡೆದಿತ್ತು. ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಮೇ 29ರಂದು ಮೈಸೂರಿನ ಟಿ ನರಸೀಪುರ ಸಮೀಪದ ಕುರುಬೂರು ಬಳಿ ಭೀಕರ ರಸ್ತೆ ಅಫಘಾತ ಸಂಭವಿಸಿತ್ತು. ಬಸ್ಗೆ ಕಾರು ಡಿಕ್ಕಿ ಹೊಡೆದು ಬಳ್ಳಾರಿ ಮೂಲದ 11 ಜನ ಸಾವನ್ನಪ್ಪಿದ್ದರು.
As many as five people, including two children, were killed in a road accident near Balichakra village in Yadgir district in Karnataka on June 6 morning. 13 others were injured in the accident and were rushed to YIMS.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
21-05-26 10:20 am
HK News Staffer
ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಬಂದ ಸ್ಲೀಪರ್ ಸೆ...
20-05-26 03:08 pm
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm