ಬ್ರೇಕಿಂಗ್ ನ್ಯೂಸ್
06-06-23 04:29 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ರಾಜ್ಯ ಸರ್ಕಾರ ವಚನ ಭ್ರಷ್ಟ ಹಾಗೂ ಹಿಟ್ಲರ್ ಸರ್ಕಾರ ಆಗಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯನ್ನು ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಹೊಸ ಸರ್ಕಾರ, ಬಿಜೆಪಿ ಅವಧಿಯಲ್ಲಿ ಜಾರಿಯಲ್ಲಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮುಂದುವರಿಸಬೇಕು. ಎಲ್ಲರಿಗೂ ಉಚಿತವಾಗಿ 200 ಯೂನಿಟ್ ವಿದ್ಯುತ್ ಕೊಡಬೇಕು. ಮತ್ತು ಯಾವುದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ಯಾರಂಟಿಗಳ ಯೂಟರ್ನ್ ಹೊಡೆಯುತ್ತಿದೆ ಸರ್ಕಾರ ಎಂದು ಕಿಡಿಕಾರಿದರು. ಸಾವಿರ ಸುಳ್ಳು ಹೇಳಿ ಸರ್ಕಾರ ತಂದಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಇದೀಗ ಉತ್ತರ ಕೊಡಬೇಕಾಗಿದೆ. ಇನ್ನು ಮುಂದೆ ಗ್ಯಾರಂಟಿ ಅಂದರೆ ಸುಳ್ಳು ಎಂಬಂತಾಗಿದೆ ಎಂದು ಕಿಡಿಕಾರಿದರು.

ಪರಿಷತ್ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉಚಿತ ಎಂದು ಘೋಷಣೆ ಮಾಡಿದ್ದರು. ವೇದಿಕೆ ಮೇಲೆ ಇದ್ದ ಎಲ್ಲರಿಗೂ ಕರೆಂಟ್ ಉಚಿತ ಎಂದಿದ್ದರು. ಮೊದಲ ಕ್ಯಾಬಿನೆಟ್ ನಲ್ಲಿ ಈಡೇರಿಸುವ ಭರವಸೆ ಕೊಟ್ಟಿದ್ದರು. ಆದರೆ ನೂರೆಂಟು ಷರತ್ತುಗಳನ್ನು ಹಾಕಿದ್ದಾರೆ. ಇವಾಗ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದ್ದಾರೆ.
ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಕೊಡುವ ಮೂಲಕ ಮನೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಿರುದ್ಯೋಗಿಗಳಿಗೆ ಮೂರು ಸಾವಿರ ಕೊಡುತ್ತೇವೆ ಎಂದವರು ಇವಾಗ 2022-23 ಅವಧಿಗೆ ಎಂದು ಷರತ್ತು ಹಾಕಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣ ಸ್ವಾಮಿ, ಎನ್ ರವಿಕುಮಾರ್, ಕೇಶವ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
The Karnataka BJP on Tuesday staged a massive protest with cows in the city against Minister for Animal Husbandry and Veterinary Services K Venkatesh's 'anti-cow slaughter law' remark. Venkatesh had kicked up a storm by asking "If one can slaughter buffaloes and bulls, what is wrong with slaughtering cows?" BJP workers expressed their outrage at his statement of reconsidering the Anti-Cow Slaughter law, which prescribes stringent ...
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm