ಬ್ರೇಕಿಂಗ್ ನ್ಯೂಸ್
06-06-23 04:29 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಗೋಹತ್ಯೆ ನಿಷೇಧ ತಿದ್ದುಪಡಿ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ಮಾಡಿರುವುದು ಹಾಗೂ ಗ್ಯಾರಂಟಿ ಘೋಷಣೆ ಪೂರ್ಣ ಪ್ರಮಾಣದ ಜಾರಿಯಾಗಿಲ್ಲ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಮಂಗಳವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜನೆ ಮಾಡಲಾಗಿತ್ತು. ರಾಜ್ಯ ಸರ್ಕಾರ ವಚನ ಭ್ರಷ್ಟ ಹಾಗೂ ಹಿಟ್ಲರ್ ಸರ್ಕಾರ ಆಗಿದೆ ಎಂದು ಬಿಜೆಪಿ ಆರೋಪ ಮಾಡಿದೆ.

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡ ಪ್ರತಿಭಟನೆಯನ್ನು ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಹೊಸ ಸರ್ಕಾರ, ಬಿಜೆಪಿ ಅವಧಿಯಲ್ಲಿ ಜಾರಿಯಲ್ಲಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮುಂದುವರಿಸಬೇಕು. ಎಲ್ಲರಿಗೂ ಉಚಿತವಾಗಿ 200 ಯೂನಿಟ್ ವಿದ್ಯುತ್ ಕೊಡಬೇಕು. ಮತ್ತು ಯಾವುದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಗ್ಯಾರಂಟಿಗಳ ಯೂಟರ್ನ್ ಹೊಡೆಯುತ್ತಿದೆ ಸರ್ಕಾರ ಎಂದು ಕಿಡಿಕಾರಿದರು. ಸಾವಿರ ಸುಳ್ಳು ಹೇಳಿ ಸರ್ಕಾರ ತಂದಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಇದೀಗ ಉತ್ತರ ಕೊಡಬೇಕಾಗಿದೆ. ಇನ್ನು ಮುಂದೆ ಗ್ಯಾರಂಟಿ ಅಂದರೆ ಸುಳ್ಳು ಎಂಬಂತಾಗಿದೆ ಎಂದು ಕಿಡಿಕಾರಿದರು.

ಪರಿಷತ್ ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉಚಿತ ಎಂದು ಘೋಷಣೆ ಮಾಡಿದ್ದರು. ವೇದಿಕೆ ಮೇಲೆ ಇದ್ದ ಎಲ್ಲರಿಗೂ ಕರೆಂಟ್ ಉಚಿತ ಎಂದಿದ್ದರು. ಮೊದಲ ಕ್ಯಾಬಿನೆಟ್ ನಲ್ಲಿ ಈಡೇರಿಸುವ ಭರವಸೆ ಕೊಟ್ಟಿದ್ದರು. ಆದರೆ ನೂರೆಂಟು ಷರತ್ತುಗಳನ್ನು ಹಾಕಿದ್ದಾರೆ. ಇವಾಗ ಗೊಂದಲಮಯ ವಾತಾವರಣ ಸೃಷ್ಟಿ ಮಾಡಿದ್ದಾರೆ.
ಮಹಿಳೆಯರಿಗೆ ಎರಡು ಸಾವಿರ ರೂಪಾಯಿ ಕೊಡುವ ಮೂಲಕ ಮನೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ನಿರುದ್ಯೋಗಿಗಳಿಗೆ ಮೂರು ಸಾವಿರ ಕೊಡುತ್ತೇವೆ ಎಂದವರು ಇವಾಗ 2022-23 ಅವಧಿಗೆ ಎಂದು ಷರತ್ತು ಹಾಕಿದ್ದಾರೆ ಎಂದು ಕಿಡಿಕಾರಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ, ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣ ಸ್ವಾಮಿ, ಎನ್ ರವಿಕುಮಾರ್, ಕೇಶವ ಪ್ರಸಾದ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
The Karnataka BJP on Tuesday staged a massive protest with cows in the city against Minister for Animal Husbandry and Veterinary Services K Venkatesh's 'anti-cow slaughter law' remark. Venkatesh had kicked up a storm by asking "If one can slaughter buffaloes and bulls, what is wrong with slaughtering cows?" BJP workers expressed their outrage at his statement of reconsidering the Anti-Cow Slaughter law, which prescribes stringent ...
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm