ಬ್ರೇಕಿಂಗ್ ನ್ಯೂಸ್
06-06-23 05:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.06: ಬೆಂಗಳೂರು - ಮೈಸೂರು ಎಕ್ಸ್ಪ್ರೆಸ್ವೇ ಕುಂಬಳಗೋಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾದಲ್ಲಿ ಮಳವಳ್ಳಿ ಕ್ಷೇತ್ರದ ಶಾಸಕ ನರೇಂದ್ರ ಸ್ವಾಮಿ ಅವರ ಕಾರನ್ನು ತಡೆದ ಟೋಲ್ ಸಿಬ್ಬಂದಿ, ನಿಮಗೆ ಹೈವೆಯಲ್ಲಿ ಹೋಗೋದಕ್ಕೆ ಬಿಟ್ಟಿಯಾಗಿ ಬಿಡ್ತೀವಿ. ನಾವು ಕಳಿಸಿದಾಗ ಹೋಗಬೇಕು, ಎಂದು ಅವಾಜ್ ಹಾಕಿದ್ದಾರೆ.
ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಸಂಚಾರ ಮಾಡುವ ಶಾಸಕರು, ಸಚಿವರು, ಸಂಸದರು ಹಾಗೂ ಕೆಲವು ಜನಪ್ರತಿನಿಧಿಗಳಿಗೆ ಉಚಿತವಾಗಿ ಪ್ರಯಾಣ ಮಾಡುವ ಅವಕಾಶವಿದೆ. ಆದರೆ, ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರು ಬೆಂಗಳೂರಿನಿಂದ ಮಳವಳ್ಳಿಗೆ ಹೋಗುವಾಗ ಬೆಂಗಳೂರು ಹೊರವಲಯದ ಕುಂಬಳಗೋಡು ಬಳಿಯ ಕಣಮಿಣಿಕಿ ಟೋಲ್ ದಾಟಿ ಹೋಗುವ ಮುನ್ನ ಶಾಸಕರ ಪಾಸ್ ಕೂಡ ತೋರಿಸಲಾಗಿದೆ. ಆದರೂ, ನಿಮ್ಮನ್ನ ಬಿಟ್ಟಿಯಾಗಿ ಹೈವೇಯಲ್ಲಿ ಹೋಗೋಕೆ ಬಿಡ್ತೀವಿ ನಾವು ಅನುಮತಿ ಕೊಟ್ಟಾಗಲೇ ನೀವು ಟೋಲ್ ದಾಟಿ ಹೋಗಬೇಕು ಎಂದು ಶಾಸಕರಿಗೆ ಅವಾಜ್ ಹಾಕಿದ್ದಾನೆ.
ಪಾಸ್ ಇದ್ದರೂ ಶಾಸಕರ ಕಾರು ತಡೆದು ನಿಲ್ಲಿಸಿದ ಸಿಬ್ಬಂದಿ:
ಬೆಂಗಳೂರು- ದಶಪಥ ಹೆದ್ದಾರಿಯಲ್ಲಿ ಟೋಲ್ ಸಿಬ್ಬಂದಿಗಳ ಕಿರಿಕ್ ಹೆಚ್ಚಾಗುತ್ತಿದೆ. ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವೇಳೆ ಜನಸಾಮಾನ್ಯರ ಜೊತೆಗೆ ಮಾತ್ರವಲ್ಲದೇ ಈಗ ಶಾಸಕರ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಜೊತೆ ಭಾನುವಾರ ಸಂಜೆ ಟೋಲ್ ಸಿಬ್ಬಂದಿ ಕ್ಯಾತೆ ತೆಗೆದು ಶಾಸಕರಿಗೇ ಅವಾಜ್ ಹಾಕಿದ್ದಾರೆ. ಬೆಂಗಳೂರಿನಿಂದ ಮಳವಳ್ಳಿ ಕಡೆ ಹೋಗ್ತಿದ್ದ ಶಾಸಕ ನರೇಂದ್ರ ಸ್ವಾಮಿಗೆ ಕುಂಬಳಗೂಡು ಬಳಿಯ ಕಣಮಿಣಿಕಿ ಟೋಲ್ ಪ್ಲಾಜಾ ಸಿಬ್ಬಂದಿ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಕಾರಿನಲ್ಲಿ ಶಾಸಕರ ವಾಹನ ಪಾಸ್ ಇದ್ರೂ, ತಡೆದು ನಿಲ್ಲಿಸಿದ್ದ ಟೋಲ್ ಸಿಬ್ಬಂದಿಗೆ ಶಾಸಕರು ಪ್ರಶ್ನೆ ಮಾಡಿದ್ದಾರೆ.
ನಾನು ನೋಡದ ಪೊಲೀಸಾ, ಯಾರು ಬರ್ತಾರೋ ಬರಲಿ:
ಈ ವೇಳೆ ಟೋಲ್ ಸಿಬ್ಬಂದಿ ಹಾಗೂ ಶಾಸಕರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ. ಪೋಲಿಸರು ಬರಲಿ ಎಂದ ಶಾಸಕ ನರೇಂದ್ರ ಸ್ವಾಮಿ ಹೇಳಿದ್ದಕ್ಕೆ ಯಾವ ಪೋಲಿಸರು ಬೇಕಾದರೆ ಬರಲಿ, ನಾನು ನೋಡಿರದ ಪೋಲಿಸಾ ಎಂದು ಏಕವಚನದಲ್ಲೇ ಟೋಲ್ ಸಿಬ್ಬಂದಿ ಶಾಸಕರಿಗೆ ಅವಾಜ್ ಹಾಕಿದ್ದಾರೆ. ನಿಮ್ಮನ್ನ ಹೈವೆಯಲ್ಲಿ ಬಿಟ್ಟಿ, ಫ್ರೀಯಾಗಿ ಬಿಡ್ತಾ ಇದ್ದೀವಿ ಎಂದು ನೀವೂ ಬಂದ್ವಾ ಹೋದ್ವಾ ಅನ್ನೋದನ್ನು ಕಲೀಬೇಕು ಎಂದು ಶಾಸಕರಿಗೆ ಏರು ಧ್ವನಿಯಲ್ಲೇ ಟೋಲ್ ಸಿಬ್ಬಂದಿ ಅವಾಜ್ ಹಾಕಿದ್ದಾನೆ. ಜೊತೆಗೆ, ಟೋಲ್ ಸಿಬ್ಬಂದಿ ಶಾಸಕರಿಗೆ ಕೈ ತೋರಿಸುತ್ತಾ ಶಾಸಕ ನರೇಂದ್ರ ಸ್ವಾಮಿ ಜೊತೆ ಅನುಚಿತ ವರ್ತನೆ ತೋರಿದ್ದಾನೆ.
Malavalli Congress MLA PM Narendra Swamy was reportedly ill-treated by a toll plaza employee on the Bengaluru-Mysuru expressway on Sunday. The incident took place when Narendra Swamy was travelling from Mysuru to Bengaluru.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am