ಬ್ರೇಕಿಂಗ್ ನ್ಯೂಸ್
08-06-23 12:43 pm Bangalore Correspondent ಕರ್ನಾಟಕ
ಬೆಂಗಳೂರು, ಜೂ, 08: ರಾಜ್ಯ ಸರ್ಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ಸೇವೆ ಸಲ್ಲಿಸುತ್ತಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ 1994 ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾಯಿಸಲಾಗಿದ್ದು, ಮುಂದಿನ ಆದೇಶದವರೆಗೂ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ (ಎಡಿಜಿಪಿ) ನೇಮಿಸಲಾಗಿದೆ.
ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
ಇದಲ್ಲದೆ, ಪೊಲೀಸ್ ಕಂಪ್ಯೂಟರ್ ವಿಭಾಗದ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
11 ಐಎಎಸ್ ಅಧಿಕಾರಿಗಳ ವರ್ಗಾವಣೆ ;
ಎರಡು ದಿನಗಳ ಹಿಂದೆಯಷ್ಟೇ ಆರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಕರ್ನಾಟಕ ಸರ್ಕಾರ ಮತ್ತು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿತ್ತು. ಕಪಿಲ್ ಮೋಹನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಈವರೆಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ಪಂಕಜ್ ಕುಮಾರ್ ಪಾಂಡೆ ಅವರು ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ಪಂಕಜ್ ಅವರನ್ನು ಮುಕ್ತಿಗೊಳಿಸಲಾಗಿದೆ. ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಉಮಾಶಂಕರ್ ಎಸ್.ಆರ್. ಅವರ ವರ್ಗಾವಣೆಯಿಂದ ತೆರವಾಗಿದ್ದ ಸಹಕಾರ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮಂಜುನಾಥ ಪ್ರಸಾದ್ ಎನ್, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕ್ಕುಮಾರ್ ಅವರನ್ನು ಬೆಂಗಳೂರಿನ ಕೃಷಿ ಇಲಾಖೆಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಆದೇಶಿಸಲಾಗಿದೆ. ಈ ಹುದ್ದೆಯನ್ನು ರವಿಶಂಕರ್ ಜೆ ಅವರು ಹೆಚ್ಚುವರಿಯಾಗಿ ನಿಭಾಯಿಸುತ್ತಿದ್ದರು. ಸದ್ಯ ಈ ಸೇವೆಯಿಂದ ರವಿಶಂಕರ್ ಅವರನ್ನು ಮುಕ್ತಿಗೊಳಿಸಲಾಗಿದೆ.
Law and order ADGP Alok Kumar transferred as ADGP Traffic, Hitendra appointed as new ADGP law and order for Karnataka. Hitendra is new Additional Director General of Police (ADGP), Law and Order. Alok Kumar who was serving as ADGP, Law and Order, has been transferred and posted as ADGP, Traffic and Road Safety, Bengaluru, in the upgraded vacant post. Hitendra was serving as ADGP, Crime and Technical Services, Bengaluru.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:02 pm
HK News Staffer
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am