ಬ್ರೇಕಿಂಗ್ ನ್ಯೂಸ್
09-06-23 07:11 pm HK News Desk ಕರ್ನಾಟಕ
ತುಮಕೂರು, ಜೂನ್ 9: ರಾಷ್ಟ್ರೀಯ ಹೆದ್ದಾರಿಯಲ್ಲಿ ಕುರು ಸಾಗಾಣಿಕೆ ಮಾಡುತ್ತಿದ್ದವರನ್ನು ಅಡ್ಡಗಟ್ಟಿ ಪೊಲೀಸರು ಹಣ ಪಡೆಯುತ್ತಿದ್ದ ಘಟನೆ ಬೆಳಕಿಗ ಬಂದಿದೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಮೇಲೆ ಲಂಚ ಪಡೆದ ಆರೋಪ ಮಾಡಲಾಗಿದೆ.
ಹೈವೇಗಳಲ್ಲಿ ಸಾಗುವ ಕಂಟೇನರ್ ಗಳನ್ನು ತಡೆದು ಲಂಚಕ್ಕಾಗಿ ಬೇಡಿಕೆ ಇಡುವ ದೃಶ್ಯಗಳನ್ನು ಸಾರ್ವಜನಿಕರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಪೊಲೀಸರು ಲಂಚ ಸ್ವೀಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಚಿದಾನಂದಸ್ವಾಮಿ, ಜೀಪ್ ಚಾಲಕ ಚಿಕ್ಕಹನುಮಯ್ಯ ಎನ್ನುವವರೇ ಹಣ ವಸೂಲಿ ಮಾಡುವಾಗ ಸಿಕ್ಕಿ ಬಿದ್ದಿರುವ ಪೊಲೀಸ್ ಅಧಿಕಾರಿಗಳಾಗಿದ್ದಾರೆ.
ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಈ ವಿಡಿಯೋ ಮಾಡಿದ್ದು, ಪೊಲೀಸರಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಆರಂಭದಲ್ಲಿ ಏನೂ ಆಗಿಲ್ಲ ಎನ್ನುವಂತೆ ಸುಮ್ಮನಿದ್ದ ಪೊಲೀಸರು, ನಂತರ ತಾವು ಪಡೆದಿದ್ದ ಹಣವನ್ನು ಲಾರಿ ಚಾಲಕನಿಗೆ ವಾಪಸ್ ಕೊಟ್ಟಿದ್ದಾರೆ.
ಎಪಿಎಂಸಿ ಮಾರುಕಟ್ಟೆಗಳನ್ನು ಕುರಿ, ಮೇಕೆಗಳನ್ನು ಖರೀದಿ ಮಾಡಿ, ಸಾಗಾಣೆ ಮಾಡುತ್ತಿರುವುದಕ್ಕೆ ಅಗತ್ಯವಾಗಿ ದಾಖಲೆಗಳು ಇದ್ದರೂ ಹಣ ಯಾಕೆ ವಸೂಲಿ ಮಾಡಿದ್ದೀರಾ ಎಂದು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು, ನಮ್ಮಿಂದ ತಪ್ಪಾಗಿದೆ ಬಿಟ್ಟುಬಿಡಿ ಅಣ್ಣಾ ಎಂದು ಕ್ಷಮೆ ಕೇಳಿದ್ದಾರೆ.
ಇಷ್ಟಕ್ಕೇ ಸುಮ್ಮನಾಗದ ಕಾರ್ಯಕರ್ತರು, ನೀವೂ ರೈತರ ಮಕ್ಕಳೇ ಅಲ್ಲವೇ, ದಿನವೆಲ್ಲಾ ಕಷ್ಟಪಟ್ಟು ದುಡಿದರೂ 200 ರುಪಾಯಿ ಸಿಗಲ್ಲ, ನೀವು ನೋಡಿದ್ರೆ ಈ ರೀತಿ ಸುಲಿಗೆ ಮಾಡ್ತೀದ್ದೀರಿ, ಈ ದುಡ್ಡಲ್ಲಿ ನಿಮ್ಮ ಮನೆಗೆ ತಿಂಡಿ ತೆಗೆದುಕೊಂಡು ಹೋಗ್ತೀರಿ, ಅವರು ನಿಮ್ಮ ಶ್ರಮದ ದುಡಿಮೆಯಲ್ಲಿ ತಿನ್ನುತ್ತಿದ್ದಾರ? ಇನ್ನಾದರೂ ಬದಲಾಗಿ ಎಂದು ಪೊಲೀಸರಿಗೆ ಬುದ್ದಿ ಹೇಳಿದ್ದಾರೆ.
ಈ ಹೆದ್ದಾರಿಯಲ್ಲಿ ಲಾರಿಗಳಿಂದ ಪೊಲೀಸರು 200-300 ರುಪಾಯಿ ಲಂಚ ಪಡೆಯುವುದು ಸಾಮಾನ್ಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರ ತವರು ಜಿಲ್ಲೆಯಲ್ಲೇ ಈ ರೀತಿ ಲಂಚಾವತಾರ ಇದ್ದರೆ ಬೇರೆ ಜಿಲ್ಲೆಗಳ ಗತಿಯೇನು ಎಂದು ಸಾರ್ವಜನಿರಕು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಬ್ಬರು ಪೊಲೀಸರು ಅಮಾನತು
ಇನ್ನು ಲಂಚ ಪಡೆದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಎಸ್ಐ ಮತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಎಸ್ಪಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
An Assistant Sub-Inspector and a jeep driver were suspended for allegedly extorting money from truck drivers on the National Highway 48 (NH-48) between Tumakuru and Sira on Friday. The action was taken after a few people questioned them when they were caught accepting bribes.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm