ಬ್ರೇಕಿಂಗ್ ನ್ಯೂಸ್
09-06-23 07:11 pm HK News Desk ಕರ್ನಾಟಕ
ತುಮಕೂರು, ಜೂನ್ 9: ರಾಷ್ಟ್ರೀಯ ಹೆದ್ದಾರಿಯಲ್ಲಿ ಕುರು ಸಾಗಾಣಿಕೆ ಮಾಡುತ್ತಿದ್ದವರನ್ನು ಅಡ್ಡಗಟ್ಟಿ ಪೊಲೀಸರು ಹಣ ಪಡೆಯುತ್ತಿದ್ದ ಘಟನೆ ಬೆಳಕಿಗ ಬಂದಿದೆ. ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಮೇಲೆ ಲಂಚ ಪಡೆದ ಆರೋಪ ಮಾಡಲಾಗಿದೆ.
ಹೈವೇಗಳಲ್ಲಿ ಸಾಗುವ ಕಂಟೇನರ್ ಗಳನ್ನು ತಡೆದು ಲಂಚಕ್ಕಾಗಿ ಬೇಡಿಕೆ ಇಡುವ ದೃಶ್ಯಗಳನ್ನು ಸಾರ್ವಜನಿಕರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಪೊಲೀಸರು ಲಂಚ ಸ್ವೀಕರಿಸುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯ ಎಎಸ್ಐ ಚಿದಾನಂದಸ್ವಾಮಿ, ಜೀಪ್ ಚಾಲಕ ಚಿಕ್ಕಹನುಮಯ್ಯ ಎನ್ನುವವರೇ ಹಣ ವಸೂಲಿ ಮಾಡುವಾಗ ಸಿಕ್ಕಿ ಬಿದ್ದಿರುವ ಪೊಲೀಸ್ ಅಧಿಕಾರಿಗಳಾಗಿದ್ದಾರೆ.

ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಈ ವಿಡಿಯೋ ಮಾಡಿದ್ದು, ಪೊಲೀಸರಿಗೆ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ಆರಂಭದಲ್ಲಿ ಏನೂ ಆಗಿಲ್ಲ ಎನ್ನುವಂತೆ ಸುಮ್ಮನಿದ್ದ ಪೊಲೀಸರು, ನಂತರ ತಾವು ಪಡೆದಿದ್ದ ಹಣವನ್ನು ಲಾರಿ ಚಾಲಕನಿಗೆ ವಾಪಸ್ ಕೊಟ್ಟಿದ್ದಾರೆ.
ಎಪಿಎಂಸಿ ಮಾರುಕಟ್ಟೆಗಳನ್ನು ಕುರಿ, ಮೇಕೆಗಳನ್ನು ಖರೀದಿ ಮಾಡಿ, ಸಾಗಾಣೆ ಮಾಡುತ್ತಿರುವುದಕ್ಕೆ ಅಗತ್ಯವಾಗಿ ದಾಖಲೆಗಳು ಇದ್ದರೂ ಹಣ ಯಾಕೆ ವಸೂಲಿ ಮಾಡಿದ್ದೀರಾ ಎಂದು ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಪೊಲೀಸರು, ನಮ್ಮಿಂದ ತಪ್ಪಾಗಿದೆ ಬಿಟ್ಟುಬಿಡಿ ಅಣ್ಣಾ ಎಂದು ಕ್ಷಮೆ ಕೇಳಿದ್ದಾರೆ.
ಇಷ್ಟಕ್ಕೇ ಸುಮ್ಮನಾಗದ ಕಾರ್ಯಕರ್ತರು, ನೀವೂ ರೈತರ ಮಕ್ಕಳೇ ಅಲ್ಲವೇ, ದಿನವೆಲ್ಲಾ ಕಷ್ಟಪಟ್ಟು ದುಡಿದರೂ 200 ರುಪಾಯಿ ಸಿಗಲ್ಲ, ನೀವು ನೋಡಿದ್ರೆ ಈ ರೀತಿ ಸುಲಿಗೆ ಮಾಡ್ತೀದ್ದೀರಿ, ಈ ದುಡ್ಡಲ್ಲಿ ನಿಮ್ಮ ಮನೆಗೆ ತಿಂಡಿ ತೆಗೆದುಕೊಂಡು ಹೋಗ್ತೀರಿ, ಅವರು ನಿಮ್ಮ ಶ್ರಮದ ದುಡಿಮೆಯಲ್ಲಿ ತಿನ್ನುತ್ತಿದ್ದಾರ? ಇನ್ನಾದರೂ ಬದಲಾಗಿ ಎಂದು ಪೊಲೀಸರಿಗೆ ಬುದ್ದಿ ಹೇಳಿದ್ದಾರೆ.
ಈ ಹೆದ್ದಾರಿಯಲ್ಲಿ ಲಾರಿಗಳಿಂದ ಪೊಲೀಸರು 200-300 ರುಪಾಯಿ ಲಂಚ ಪಡೆಯುವುದು ಸಾಮಾನ್ಯವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಗೃಹ ಸಚಿವ ಪರಮೇಶ್ವರ ಅವರ ತವರು ಜಿಲ್ಲೆಯಲ್ಲೇ ಈ ರೀತಿ ಲಂಚಾವತಾರ ಇದ್ದರೆ ಬೇರೆ ಜಿಲ್ಲೆಗಳ ಗತಿಯೇನು ಎಂದು ಸಾರ್ವಜನಿರಕು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಬ್ಬರು ಪೊಲೀಸರು ಅಮಾನತು
ಇನ್ನು ಲಂಚ ಪಡೆದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಎಎಸ್ಐ ಮತ್ತು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ತುಮಕೂರು ಜಿಲ್ಲಾ ಎಸ್ಪಿ ರಾಹುಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
An Assistant Sub-Inspector and a jeep driver were suspended for allegedly extorting money from truck drivers on the National Highway 48 (NH-48) between Tumakuru and Sira on Friday. The action was taken after a few people questioned them when they were caught accepting bribes.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm