Kadaba Accident: ಕಡಬ; ಸೇತುವೆಗೆ ಡಿಕ್ಕಿ ಹೊಡೆದು ಹೊಳೆಗೆ ಬಿದ್ದ ಕಾರು, ಓರ್ವ ಸಾವು, ಚಾಲಕ ಪಾರು ! 

11-06-23 12:40 pm       HK News Desk   ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಢಿಕ್ಕಿ ಹೊಡೆದು ಸೇತುವೆಯ ಕೆಳಗೆ ನೀರಿಗೆ ಬಿದ್ದಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಕಡಬ, ಜೂನ್ 11: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೇತುವೆಗೆ ಢಿಕ್ಕಿ ಹೊಡೆದು ಸೇತುವೆಯ ಕೆಳಗೆ ನೀರಿಗೆ ಬಿದ್ದಿರುವ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ತಮಿಳುನಾಡಿನ ಹೊಸೂರು ಕೃಷ್ಣಗಿರಿ ಮೂಲದ ಹರಿಪ್ರಸಾದ್(44) ಮೃತಪಟ್ಟಿದ್ದಾರೆ. 

ಇನ್ನು ಕಾರು ಚಾಲಕ ಗೋಪಿ ಕಾಲು ಮುರಿದು ಗಂಭೀರ ಗಾಯಗೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಾರು ಹೊಸೂರಿನಿಂದ ಮಂಗಳೂರು ಕಡೆಗೆ ಬರುತ್ತಿತ್ತು ಎನ್ನಲಾಗುತ್ತಿದೆ. ಗಾಯಾಳುವಿಗೆ ನೆಲ್ಯಾಡಿಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು, ಚಾಲಕನ ನಿಯಂತ್ರಣ ತಪ್ಪಿ ಹೊಳಗೆ ಬಿದ್ದಿರಬಹುದೆಂದು ಪ್ರಾಥಮಿಕ ವರದಿಯಲ್ಲಿ ಹೇಳಲಾಗಿದೆ.

ಸ್ಥಳೀಯ ಪರಶುರಾಮ ಕ್ರೇನ್ ತಂಡ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರನ್ನು ಮೇಲೆತ್ತುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸ್ಥಳದಲ್ಲಿ ನೆಲ್ಯಾಡಿ ಹೊರ ಠಾಣಾ ಸಿಬ್ಬಂದಿ, ಉಪ್ಪಿನಂಗಡಿ ಠಾಣಾಧಿಕಾರಿ ಪರಿಶೀಲನೆ ನಡೆಸುತ್ತಿದ್ದಾರೆ.

Kadaba Car rams bridge falls into stream water, one killed, driver injured in Mangalore. The the diseased as been identified as HariPrasad from Tamilnadu Krishnagiri Hosur. Driver Gopi whose legs have been fractured is admitted in the government hospital