ಬ್ರೇಕಿಂಗ್ ನ್ಯೂಸ್
11-06-23 07:02 pm HK News Desk ಕರ್ನಾಟಕ
ಕೋಲಾರ, ಜೂನ್ 11: ಕಾಂಗ್ರೆಸ್ನ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಕೋಲಾರದಲ್ಲಿ ಕೆಜಿಎಫ್ ಶಾಸಕಿ ಎಂ ರೂಪಕಲಾ ಶಶಿಧರ್ ಅವರು ಶಕ್ತಿ ಯೋಜನೆಗೆ ಚಾಲನೆ ನೀಡಿದರು.
ಕೋಲಾರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ರೂಪಕಲಾ ಶಶಿಧರ್ ಅವರು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಮಹಿಳೆಯರು ಕುಳಿತಿದ್ದ ಬಸ್ ಚಲಾಯಿಸಿ ಗಮನ ಸೆಳೆದಿದ್ದಾರೆ. ರಾಬರ್ಟ್ಸನ್ ಪೇಟೆಯ ಕುವೆಂಪು ಬಸ್ ನಿಲ್ದಾಣದಿಂದ ಸ್ವಲ್ಪ ದೂರ ಬಸ್ ಓಡಿಸಿದರು. ಇದಕ್ಕೆ ಬಸ್ ಚಾಲಕ ನೆರವಾಗಿ, ಅವರಿಗೆ ಚಾಲನೆಯ ಸಲಹೆ ನೀಡಿದರು.
ಆರಂಭದಲ್ಲಿ ಗೇರ್ ಸರಿಯಾಗಿ ಬೀಳದೆ ಎರಡು ಬಾರಿ ಬಸ್ ಹಿಮ್ಮುಖವಾಗಿ ಚಲಿಸಿದ್ದು, ಹಿಂಭಾಗದಲ್ಲಿದ್ದ ಮತ್ತೊಂದು ಬಸ್ಗೆ ಡಿಕ್ಕಿಯಾಗುವುದು ತಪ್ಪಿದೆ. ಕೊಂಚ ದೂರ ಬಸ್ ಚಲಾಯಿಸಿದ ಬಳಿಕ ಶಾಸಕಿ ರೂಪಕಲಾ ಶಶಿಧರ್ ಅವರು ಮತ್ತೆ ಸ್ವಲ್ಪ ದೂರ ಬಸ್ನಲ್ಲಿ ಕುಳಿತು ಪ್ರಯಾಣಿಸಿದರು.
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಅಪ್ಪ-ಮಕ್ಕಳು ಸ್ಫರ್ಧಿಸಿದ್ದರು. ಈ ಪೈಕಿ ಕೆ.ಎಚ್.ಮುನಿಯಪ್ಪ ಹಾಗೂ ಅವರ ಪುತ್ರಿ ರೂಪಾಕಲಾ ಶಶಿಧರ್ ಕೂಡ ಹೌದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದು ಕೆ.ಎಚ್.ಮುನಿಯಪ್ಪ ಅವರು ಗೆದ್ದು ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರೂ ಆಗಿದ್ದಾರೆ. ಕೆಜಿಎಫ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ರೂಪಾಕಲಾ ಶಶಿಧರ್ ಕೂಡ ಜಯಭೇರಿ ಬಾರಿಸಿದ್ದರು.
ಮಹಿಳೆಯರಿಗೆ ಉಚಿತ ಪ್ರಯಾಣ: ಬಸ್ ಚಲಾಯಿಸಿದ ಕೆಜಿಎಫ್ ಶಾಸಕಿ ರೂಪಕಲಾ #kgf #shaktischeme #roopakala pic.twitter.com/DVzQQ5sLIM
— Prajavani (@prajavani) June 11, 2023
Chief Minister Siddaramaiah today (June 11, Sunday) launched the ambitious Shakti Yojana to provide free bus travel for women, which is one of the 5 guarantees of the Congress. Shakti Yojana was launched by KGF MLA Roopakala Shashidhar in Kolar.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm