ಬ್ರೇಕಿಂಗ್ ನ್ಯೂಸ್
12-06-23 11:45 am HK News Desk ಕರ್ನಾಟಕ
ರಾಮನಗರ, ಜೂನ್ 12: ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.


ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.

ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru Mysuru express way road accident, two friends killed on spot at Ramnagara.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am