ಬ್ರೇಕಿಂಗ್ ನ್ಯೂಸ್
12-06-23 11:45 am HK News Desk ಕರ್ನಾಟಕ
ರಾಮನಗರ, ಜೂನ್ 12: ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.


ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.

ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru Mysuru express way road accident, two friends killed on spot at Ramnagara.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm