ಬ್ರೇಕಿಂಗ್ ನ್ಯೂಸ್
12-06-23 11:45 am HK News Desk ಕರ್ನಾಟಕ
ರಾಮನಗರ, ಜೂನ್ 12: ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.


ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.

ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru Mysuru express way road accident, two friends killed on spot at Ramnagara.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm