ಬ್ರೇಕಿಂಗ್ ನ್ಯೂಸ್
12-06-23 11:45 am HK News Desk ಕರ್ನಾಟಕ
ರಾಮನಗರ, ಜೂನ್ 12: ಬೆಂಗಳೂರು-ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಸ್ನೇಹಿತರಿಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಸ್ನೇಹಿತರ ಪರಿಸ್ಥಿತಿ ಗಂಭೀರವಾಗಿದೆ. ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಭಾನುವಾರ ಈ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಕೋಲೂರು ಗೇಟ್ ಬಳಿಯ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಕಾರು ಡಿಕ್ಕಿಯಾದ ರಭಸಕ್ಕೆ ಮದ್ದೂರು ಮೂಲದ ಚಾಲಕ ಮಂಜೇಶ್ (28) ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದರು.
ಗಂಭೀರ ಗಾಯಗೊಂಡಿದ್ದ ವಿಜಯ್, ವಿನಯ್ ಹಾಗೂ ನಿಖಿಲ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ನಿವಾಸಿ ವಿನಯ್ (23) ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ರಾಮನಗರದ ಮಂಜುನಾಥ್ ನಗರ ನಿವಾಸಿ ವಿಜಯ್ (23), ಮತ್ತೊಬ್ಬ ಗಾಯಾಳು ನಿಖಿಲ್ಗೆ ಚಿಕಿತ್ಸೆ ಮುಂದುವರಿದಿದೆ. ವಿಜಯ್ ಪರಿಸ್ಥಿತಿ ಚಿಂತಾಜನಕವಾಗಿದೆ.
ನಾಲ್ವರು ಸ್ನೇಹಿತರು ಮದ್ದೂರಿನ ಬೆಸಗರಹಳ್ಳಿಗೆ ಬಟ್ಟೆ ತರಲು ಹೋಗಿದ್ದರು. ಅಲ್ಲಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದಿದೆ. ವಾಹನ ಚಲಾಯಿಸುತ್ತಿದ್ದ ಮಂಜೇಶ್ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಸಾವಿಗೀಡಾಗಿದ್ದ. ಅಪಘಾತಕ್ಕೂ ಮುನ್ನ ಈ ನಾಲ್ವರು ಕಾರಿನಲ್ಲಿ ಜಾಲಿಯಾಗಿ ಹಾಡು ಹೇಳಿಕೊಂಡು ಬಂದಿದ್ದು, ವಿಡಿಯೋ ಕೂಡ ಮಾಡಿಕೊಂಡಿದ್ದರು. ಆದರೆ ಅದಾದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಗಿದ್ದರು.
ಕಾರು ರಾಮನಗರದ ಕಡೆಗೆ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Bengaluru Mysuru express way road accident, two friends killed on spot at Ramnagara.
13-05-24 09:17 pm
Bangalore Correspondent
parishad elections, JDS, BJP: ಪರಿಷತ್ ಚುನಾವಣೆ...
13-05-24 05:57 pm
Prajwal Revanna, Ticket Cancelled: ಪ್ರಜ್ವಲ್ ರ...
13-05-24 04:34 pm
Bangalore accident, Minor, Boy killed: ರಸ್ತೆಯ...
13-05-24 03:02 pm
Shivamogga Accident: ಶಿವಮೊಗ್ಗ ; ಆಟೋಗೆ ಡಿಕ್ಕಿ...
13-05-24 01:04 pm
13-05-24 07:56 pm
HK News Desk
ಬುರ್ಖಾ ಹಾಕೊಂಡು ಬಂದಿದ್ದ ಮುಸ್ಲಿಂ ಮತದಾರರಿಗೆ ನಿಮ...
13-05-24 03:53 pm
ಮದುವೆ ಆದ್ರು ಡಾಕ್ಟರ್ ಲೇಡಿಗೆ ತೀರದ ದಾಹ ; ಇಬ್ಬರು...
11-05-24 09:43 pm
Kareena Kapoor, Bible Book, court: “ಪ್ರೆಗ್ನೆನ...
11-05-24 03:13 pm
Ram Mandir, Nana Patole, Nrendra modi: ಮೋದಿಯಿ...
10-05-24 10:05 pm
13-05-24 10:15 pm
Mangalore Correspondent
Udupi former MLA Raghupati bhat quits BJP: ಬಂ...
13-05-24 07:27 pm
Ashok Rai, Puttur: ಚುನಾವಣೆ ನೀತಿ ಸಂಹಿತೆ ಉಲ್ಲಂಘ...
13-05-24 02:27 pm
Tv Serial Helmet Fine Police: ಟಿವಿ ಸೀರಿಯಲ್ನಲ್...
12-05-24 06:30 pm
ಕುಂದಾಪುರದ ಫೈನಾನ್ಶಿಯರ್ ಹತ್ಯೆ ಆರೋಪಿಗೆ ಹಿರಿಯಡ್ಕ...
12-05-24 05:41 pm
13-05-24 07:15 pm
Giridhar, Mangaluru Correspondent
Part time job, crime, online fraud: ಆನ್ಲೈನ್...
13-05-24 04:10 pm
Fake Currency Notes, Mangalore, Crime: ಕಾಸರಗೋ...
12-05-24 01:53 pm
Mangalore Crime, Sexual Assult: ಅನ್ಯಕೋಮಿನ ಬಾಲ...
11-05-24 10:18 pm
Bangalore Crime, Cyber, Roopa Iyer: ಸೆಲೆಬ್ರಿಟ...
10-05-24 05:04 pm