ಬ್ರೇಕಿಂಗ್ ನ್ಯೂಸ್
13-06-23 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 13: ಸಾವಿರಾರು ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಗೆ ಆದೇಶ ಹೊರಡಿಸುವ ಮೂಲಕ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಾಕ್ ನೀಡಿದೆ.
ಶಾಸಕ ಜನಾರ್ದನ ರೆಡ್ಡಿ ಹಾಗೂ ಪತ್ನಿ ಅರುಣಾ ಲಕ್ಷ್ಮಿಗೆ ನ್ಯಾಯಾಲಯ ಆಘಾತ ನೀಡಿದ್ದು, ರೆಡ್ಡಿ ದಂಪತಿ ಒಡೆತನದ 2009ರ ಜನವರಿ ನಂತರ ಖರೀದಿ ಮಾಡಿದ ಆಸ್ತಿಗಳನ್ನು ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.


ಅರುಣಾ ಲಕ್ಷ್ಮೀ ಹೆಸರಲ್ಲಿ 75ಕ್ಕೂ ಅಧಿಕ ಆಸ್ತಿಗಳಿವೆ. ಬೆಂಗಳೂರು, ಬಳ್ಳಾರಿ ಹಾಗೂ ಆಂಧ್ರದಲ್ಲಿ ರೆಡ್ಡಿ ದಂಪತಿ ಆಸ್ತಿ ಮಾಡಿದ್ದಾರೆ. ಇದೀಗ ರೆಡ್ಡಿ ದಂಪತಿ ಒಡೆತನದ ನೂರಕ್ಕೂ ಅಧಿಕ ಆಸ್ತಿಗಳನ್ನು ಜಪ್ತಿ ಮಾಡುವಂತೆ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಆದೇಶ ಮಾಡಿದ್ದಾರೆ.
ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳಿವೆ. ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ವೇಳೆ ಸಿಬಿಐ ಅಧಿಕಾರಿಗಳು ಆಸ್ತಿಗಳನ್ನು ಗುರುತಿಸಿದ್ದರು. ಸಿಬಿಐ ಪರವಾಗಿ ವಿಶೇಷ ಅಭಿಯೋಜಕ ಗೋವಿಂದನ್ ವಾದಿಸಿದ್ದರು.
![]()
ಸಿಬಿಐ ನ್ಯಾಯಾಲಯದ ಆದೇಶದಂತೆ, ಆಸ್ತಿಯನ್ನು ಸಿಬಿಐ ಮುಟ್ಟುಗೋಲು ಹಾಕಿಕೊಂಡರೆ ಆಸ್ತಿಯ ಮೇಲೆ ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ ಅವರಿಗೆ ಇರುವ ಎಲ್ಲಾ ಕಾನೂನಾತ್ಮಕ ಹಕ್ಕುಗಳಿಗೆ ತಾತ್ಕಾಲಿಕ ತಡೆ ಬೀಳಲಿದೆ. ಪ್ರಕರಣವು ಇತ್ಯರ್ಥವಾಗುವವರೆಗೂ ಆ ಆಸ್ತಿಗಳ ಮೇಲೆ ಅವರಿಬ್ಬರು ತಮ್ಮ ಹಕ್ಕುಗಳನ್ನು ಚಲಾಯಿಸುವಂತಿರುವುದಿಲ್ಲ. ಆಸ್ತಿಗಳೇನೋ ಅವರ ಹೆಸರಿನಲ್ಲೇ ಮುಂದುವರಿಯುತ್ತವೆ. ಆದರೆ, ಮಾಲೀಕರಾಗಿ ಅವುಗಳನ್ನು ಮಾರಾಟ ಮಾಡುವುದು, ಅವುಗಳಿಂದ ಬಾಡಿಗೆ ಇತ್ಯಾದಿ ಲಾಭಗಳನ್ನು ಮಾಡಿಕೊಳ್ಳುವುದು ಇತ್ಯಾದಿ ಯಾವುದೇ ರೀತಿಯ ಪ್ರಯೋಜನಗಳನ್ನು ರೆಡ್ಡಿ ಹಾಗೂ ಅವರ ಕುಟುಂಬ ಪಡೆಯುವ ಹಾಗಿರುವುದಿಲ್ಲ.
ಸಿಬಿಐ ನ್ಯಾಯಾಲಯವು 77 ಆಸ್ತಿಗಳನ್ನು ಮುುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿದೆಯಾದರೂ, ಈ ಆದೇಶದ ವಿರುದ್ಧ ಕಾನೂನು ಹೋರಾಟ ಮಾಡಲು ಜನಾರ್ದನ ರೆಡ್ಡಿಯವರಿಗೆ ಅವಕಾಶವಿದೆ ಎಂದು ಮೂಲಗಳು ಹೇಳಿವೆ. ಸಿಬಿಐ ನ್ಯಾಯಾಲಯದಲ್ಲೇ ಈ ತೀರ್ಪಿನ ಮರುಪರಿಶೀಲನೆಗೆ ಅರ್ಜಿ ಹಾಕಬಹುದು, ಇಲ್ಲವೇ ಅವರು ಸಿಬಿಐ ನ್ಯಾಯಾಲಯಕ್ಕಿಂತ ಉನ್ನತ ಮಟ್ಟದ ನ್ಯಾಯಾಲಯಗಳಲ್ಲಿ ಇದನ್ನು ಪ್ರಶ್ನೆ ಮಾಡಬಹುದಾಗಿದೆ.
In a setback to mining baron-turned-politician Gali Janardhana Reddy, a CBI court on Tuesday ordered the seizure of his properties and also those in the name of his wife Gali Aruna Laxmi until criminal cases against them are disposed off. The CBI had submitted a petition before the court seeking seizure of 124 properties belonging to the couple.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am