ಬ್ರೇಕಿಂಗ್ ನ್ಯೂಸ್
15-06-23 10:45 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 15: ಮತಾಂತರ ನಿಷೇಧ ಕಾಯ್ದೆ ರದ್ದು ನಿರ್ಣಯದ ವಿರುದ್ಧ ಕಿಡಿಕಾರಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ, ಇನ್ಮುಂದೆ ಮಹದೇವಪ್ಪನೂ ಕನ್ವರ್ಟ್, ಕಾಕಾ ಪಾಟೀಲನೂ ಕನ್ವರ್ಟ್ ಎಂದು ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಾಟೀಲ್, ಆಮಿಷದ ಮತಾಂತರಕ್ಕೆ ಬೆಂಬಲ ನೀಡಲು ಸಿದ್ದರಾಮಯ್ಯನವರು ಸಜ್ಜಾಗಿದ್ದಾರೆ. ಇದು ಸಿದ್ದರಾಮಯ್ಯನವರ ಮತಾಂತರ ಭಾಗ್ಯ. ಇನ್ಮುಂದೆ ಮಹದೇವಪ್ಪನೂ ಮತಾಂತರ, ಕಾಕಾ ಪಾಟೀಲನೂ ಮತಾಂತರ ಎಂದು ಕಿಡಿಕಾರಿದ್ದಾರೆ.
ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವನ್ನು ಮತ್ತೆ ಕಾಂಗ್ರೆಸ್ ಸರ್ಕಾರ ಅನುಸರಿಸಿದೆ. ಆಮಿಷದ ಮತಾಂತರವನ್ನು ನಿರ್ಬಂಧಿಸುವ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು "ಹಿಂದೂ" ಸಮಾಜವನ್ನು ಮತಾಂತರಗೊಳಿಸುವವರಿಗೆ ಬೆಂಬಲ ನೀಡಿದಂತೆ ಅಲ್ಲವೇ? ಯಾವ "ಮಾಫಿಯಾ" ಈ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಒತ್ತಡ ಹೇರಿದೆ ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.
ಅದಲ್ಲದೇ, ರಾಹುಲ್ ಗಾಂಧಿಯವರೇ ಪ್ರೀತಿಯ ಅಂಗಡಿ ಅಂದ್ರೇ ಇದೇನಾ? ಸಿದ್ದರಾಮಯ್ಯನವರ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ. ನಿಮಗೆ ಹಿಂದೂ ಸಮುದಾಯ ನಾಶವಾಗಬೇಕಾ? ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯಲು ಮತಾಂತರ ಮಾಫಿಯಾ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟವನ್ನು ಪ್ರಭಾವಿಸಿದೆ ಎಂದು ಕಿಡಿಕಾರಿದ್ದಾರೆ.
The Siddaramaiah-led Congress government has decided to withdraw the Prohibition of Conversion Act brought by the BJP government. BJP MLA Basanagowda Patil Yatnal of Vijaypura has criticized this decision of the state government and quipped that this is Siddaramaiah's conversion luck, henceforth Mahadevappa will convert and Kaka Patil will also convert.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm