ಬ್ರೇಕಿಂಗ್ ನ್ಯೂಸ್
16-06-23 10:40 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 16: ರಾಜಧಾನಿಯಲ್ಲಿ ಮಾದಕ ವ್ಯಸ್ಯನ ದಂಧೆ ಹೆಚ್ಚಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ದಂಧೆಕೋರರ ವಿರುದ್ಧ ಕಠಿಣ ಕ್ರಮಗೊಳ್ಳಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶುಕ್ರವಾರ ಮಾತನಾಡಿ, " ವೀಸಾ ಅವಧಿ ಮೀರಿದರೂ ಅಕ್ರಮ ವಾಸ ಹಾಗೂ ವಿದೇಶಿ ವಿದ್ಯಾರ್ಥಿಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿರುವ 106 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ. ವಿದೇಶಿ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ಆಯಾ ದೇಶಗಳ ರಾಯಭಾರಿ ಕಚೇರಿಗಳಿಗೆ ವಿದೇಶಾಂಗ ಇಲಾಖೆ ಮೂಲಕ ಅವರಿಗೆ ಮಾಹಿತಿ ನೀಡಲಾಗುವುದು " ಎಂದರು.
ಪೊಲೀಸ್ ಇಲಾಖೆಯು ವರ್ಗಾವಣೆ ದಂಧೆಯಾಗುತ್ತಿದೆ ಎಂಬುದರ ಬಗ್ಗೆ ಪ್ರತಿಕ್ರಿಯಿಸಿ, ಹಿಂದಿನ ಅವಧಿಯಲ್ಲಿ ವರ್ಗಾವಣೆ ದಂಧೆಯಾಗಿತ್ತು. ಈಗ ದಂಧೆ ಮಾಡಲು ಯಾವುದೇ ಕಾರಣಕ್ಕೂ ಬಿಡೋದಿಲ್ಲ. ಪಿಎಸ್ಐ ಕೇಸ್ ಬಗ್ಗೆ ತನಿಖೆ ನಡೆಯುತ್ತಿದೆ. ನೇಮಕಾತಿ ಬಗ್ಗೆ ಕೋರ್ಟ್ನಲ್ಲಿ ತಡೆಯಾಜ್ಞೆ ಇದ್ದು, ಹೆಚ್ಚು ಮಾತನಾಡುವುದಿಲ್ಲ ಎಂದರು.
ಇನ್ನು ಬೆಂಗಳೂರು ನಗರ ಸಂಚಾರ ದಟ್ಟಣೆಯಿಂದ ವಿಶ್ವಮಟ್ಟದಲ್ಲಿ ಅಪಖ್ಯಾತಿಗೆ ಒಳಗಾಗಿದೆ. ಹೀಗಾಗಿ ನಗರ ಸಂಚಾರ ದಟ್ಟಣೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್ಮುಕ್ತ ನಗರ ಮಾಡಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದೇನೆ ಎಂದರು.
ಟ್ರಾಫಿಕ್ ಸರ್ವೆಲೆನ್ಸ್ ಮಾಡುವುದಕ್ಕಾಗಿ ಡ್ರೋನ್ಗಳ ಬಳಕೆ ;
ಜನಸಂದಣಿ ಪ್ರದೇಶ ಹಾಗೂ ಟ್ರಾಫಿಕ್ ಆಗುವ ಪ್ರದೇಶಗಳಲ್ಲಿ ಸರ್ವೆಲೆನ್ಸ್ ಮಾಡುವುದಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡ್ರೋನ್ಗಳನ್ನು ಬಳಸಲಾಗುತ್ತಿದೆ. ಅಲ್ಲದೆ ಪೀಕ್ ಅವರ್ನಲ್ಲಿ ಸಂಚಾರ ದಟ್ಟಣೆ ಸುಧಾರಿಸಲು ಟ್ರಾಫಿಕ್ ಪೊಲೀಸರ ಜೊತೆಗೆ ಹೆಚ್ಚುವರಿಯಾಗಿ 10 ಮಂದಿ ಕಾನೂನು ವಿಭಾಗದ ಪೊಲೀಸರು ಕಾರ್ಯನಿರ್ವಹಿಸಲು ಸೂಚಿಸಿದ್ದೇನೆ. ರಾಜಧಾನಿಯಲ್ಲಿ ಸಂಚಾರ ದಟ್ಟಣೆಯ ದೂರುಗಳು ಬರದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು ಮುಂದಿನ ಮೂರು ತಿಂಗಳಲ್ಲಿ ಟ್ರಾಫಿಕ್ ಮುಕ್ತ ಸಿಟಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
Drug free Bengalore is our aim, Initiatives to make Bengaluru safe for women says Homeminister G. Parameshwara. In an aim to make the tech city traffic snarl-free, Home Minister G. Parameshwara told all Deputy Commissioner of Police rank officers to spend four hours every day on the roads during peak hours, during a review of Bengaluru City Police on June 16.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm