ಬ್ರೇಕಿಂಗ್ ನ್ಯೂಸ್
17-06-23 08:00 pm HK News Desk ಕರ್ನಾಟಕ
ಶಿವಮೊಗ್ಗ, ಜೂ.17: ಪೊಲೀಸರ ಹಲ್ಲೆಯಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.
ಪೊಲೀಸರು ಮಂಜುನಾಥ್ (28) ಠಾಣೆಗೆ ಕರೆಯಿಸಿ ಹಲ್ಲೆ ನಡೆಸಿರುವುದು ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರ ವಿರುದ್ಧ ಹೆಂಡತಿ ಕಮಲಾಕ್ಷಿ ದೂರು ನೀಡಿದ್ದಾರೆ.
ಜೂನ್ 11 ರಂದು ಮಂಜುನಾಥ್ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಎದುರು ನಿಂತಿದ್ದರಂತೆ. ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಪೊಲೀಸ್ ಸಿಬ್ಬಂದಿ, ಮಂಜುನಾಥ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಯಾವ ಕಾರಣಕ್ಕೆ ಥಳಿಸಿದ್ದರು ಎಂಬುದು ತಿಳಿದುಬಂದಿಲ್ಲ. ಆದರೆ ಕೈ, ಕಾಲು, ಕಪಾಳ, ಬೆನ್ನಿಗೆ ಥಳಿಸಿದ ಸಿಬ್ಬಂದಿ ಆನಂತರ ಮಂಜುನಾಥ್ ನನ್ನ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಸಂಜೆ ಹೊತ್ತಿಗೆ ಆತನನ್ನ ಸಹೋದರ ಬಿಡಿಸಿಕೊಂಡು ಮನೆಗೆ ಬಂದಿದ್ದಾರೆ. ಆದರೆ ಈ ಘಟನೆ ನಂತರ ಮಂಜುನಾಥ್ ಖಿನ್ನತೆಗೆ ಒಳ್ಳಗಾಗಿದ್ರು. ಯಾರೊಂದಿಗೂ ಮಾತನಾಡದೇ ಮಂಜುನಾಥ್ ಜೂನ್ 15 ರ ರಾತ್ರಿ ತನ್ನ ಪತ್ನಿಗೆ ಮನೆಮುಂದಿನ ಕೋಣೆಯಲ್ಲಿ ಮಲಗಲು ತಿಳಿಸಿದ್ದಾನೆ. ಆನಂತರ ಹಾಲ್ ನಲ್ಲಿ ನೇಣುಬಿಗಿದುಕೊಂಡಿದ್ದಾನೆ. ಜೂನ್ 16 ರ ಬೆಳಗ್ಗೆ ಪತ್ನಿ ಕೋಣೆಯಿಂದ ಹೊರಬಂದಾಗ ವಿಚಾರ ಗೊತ್ತಾಗಿದೆ.
ಮಂಜುನಾಥ್ಗೆ 2 ವರ್ಷದ ಮಗು ಇದ್ದು, ಪತ್ನಿ ಕಮಲಾಕ್ಷಿ ಗರ್ಭಿಣಿಯಾಗಿದ್ದಾರೆ. ತನ್ನ ಪತಿ ಸಾವಿಗೆ ಪೊಲೀಸರು ನಡೆಸಿದ ಹಲ್ಲೆಯೇ ಕಾರಣ ಎಂದು ಪತ್ನಿ ಕಮಲಾಕ್ಷಿ ಉನ್ನತ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
Shivamogga 28 year old Man commits suicide, pregnant wife allege of Police torture. The deceased has been identified as Manjunath.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm