ಶಿವಮೊಗ್ಗ ; ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲು, ತುಂಗಾ ನದಿಯಲ್ಲಿ ಈಜಲು ಹೋಗಿ ದುರಂತ ! 

18-06-23 04:34 pm       HK News Desk   ಕರ್ನಾಟಕ

ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ. 

ಶಿವಮೊಗ್ಗ, ಜೂನ್ 18: ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ. 

ಮೃತ ಉಪನ್ಯಾಸಕರು 38 ವರ್ಷದ ಪುನೀತ್ ಮತ್ತು 36 ವರ್ಷದ ಬಾಲಾಜಿ ಎಂದು ತಿಳಿದುಬಂದಿದೆ.

ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದರು. ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು ಇಂದು ಈಜಾಡಲು ತುಂಗಾ ನದಿಗೆ ಇಳಿದ್ದರು.

ಆದರೆ ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ. ಸದ್ಯ ಒಬ್ಬರ ಮೃತದೇಹ ಪತ್ತೆ ಆಗಿದ್ದು, ಇನ್ನೊಬ್ಬರ ಮೃತದೇಹಕ್ಕಾಗಿ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು. ತೀರ್ಥಹಳ್ಳಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

Shivamogga two teachers of NITTE karkala drowned in river and found dead. Both the teachers had gone to a resort to enjoy their vacation. Both the teachers got down into Tunga river and round into the river and drowned