ಬ್ರೇಕಿಂಗ್ ನ್ಯೂಸ್
19-06-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿ ಮಾತನಾಡಿದರು.

ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ. ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ ಎಂದೂ ಅವರು ತಿಳಿಸಿದರು.
'ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ' ಎಂದೂ ಅವರು ಹೇಳಿದರು.
CM Siddaramaiah warns of strict against against Moral Policing and attacks in state, says given orders to police department to take action. He spoke to media persons while handovering cheques to the families of Deceased in Communial Killings in Karnataka.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm