ಬ್ರೇಕಿಂಗ್ ನ್ಯೂಸ್
19-06-23 03:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋಮುರಾಜಕಾರಣಕ್ಕೆ ಬಲಿಯಾದ ಬಳಿಕ ಸರ್ಕಾರದ ತಾರತಮ್ಯ ನೀತಿಯಿಂದ ವಂಚನೆಗೆ ಒಳಗಾಗಿದ್ದ ಆರು ಕುಟುಂಬಗಳಿಗೆ ತಲಾ ರೂ. 25 ಲಕ್ಷ ಮೊತ್ತದ ಪರಿಹಾರ ಚೆಕ್ ಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತರಿಸಿ ಮಾತನಾಡಿದರು.

ಸರ್ಕಾರ ಸರ್ವರಿಗೂ ಸೇರಿದ್ದು. ಬಿಡಿ ಬಿಡಿಯಾಗಿ ಒಂದು ಜಾತಿ, ಒಂದು ಧರ್ಮದ ಪರವಾಗಿ ವರ್ತಿಸುವುದು ಸಂವಿಧಾನ ವಿರೋಧಿ ಕೃತ್ಯ. ಬಿಜೆಪಿಯ ದ್ವೇಷ ಮತ್ತು ತಾರತಮ್ಯ ರಾಜಕಾರಣದ ವಿರುದ್ಧ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ಸದನದಲ್ಲೇ ಧ್ವನಿ ಎತ್ತಿದ್ದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೋಮುಗಲಭೆಗಳಿಗೆ ಬಲಿಯಾದ ಮೃತರ ಹೆಸರಲ್ಲೂ ಬಿಜೆಪಿ ತಾರತಮ್ಯ ನೀತಿಯನ್ನು ಅನುಸರಿಸಿತ್ತು. ಮೃತರ ಕುಟುಂಬದವರ ಕಣ್ಣೀರು ಒರೆಸುವುದು ಮತ್ತು ಪರಿಹಾರ ವಿತರಣೆಯಲ್ಲೂ ಸರ್ಕಾರ ತಾರತಮ್ಯವನ್ನು ಮೆರೆದಿತ್ತು. ಹಿಂದಿನ ಸರ್ಕಾರ ಮಾಡಿದ್ದ ತಾರತಮ್ಯವನ್ನು ನಾವು ಸರಿಪಡಿಸಿದ್ದೇವೆ ಎಂದೂ ಅವರು ತಿಳಿಸಿದರು.
'ನಮ್ಮ ಅವಧಿಯಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಮತಾಂಧರಿಗೆ, ಅನೈತಿಕ ಪೊಲೀಸ್ ಗಿರಿಗೆ, ಜಾತಿ-ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ತಕ್ಕ ಶಾಸ್ತಿ ಮಾಡುತ್ತೇವೆ. ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಈಗಾಗಲೇ ಸ್ಪಷ್ಟ ಸೂಚನೆ ನೀಡಿದ್ದೇನೆ' ಎಂದೂ ಅವರು ಹೇಳಿದರು.
CM Siddaramaiah warns of strict against against Moral Policing and attacks in state, says given orders to police department to take action. He spoke to media persons while handovering cheques to the families of Deceased in Communial Killings in Karnataka.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm