ಬ್ರೇಕಿಂಗ್ ನ್ಯೂಸ್
19-06-23 06:12 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 19: ಜೂನ್ 30ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೆಸರನ್ನು ಘೋಷಣೆ ಮಾಡಲಾಗಿದೆ. ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಹಾಗೂ ಕಲಬುರಗಿಯ ಹಿರಿಯ ಕಾಂಗ್ರೆಸ್ ನಾಯಕ ತಿಪ್ಪನ್ನಪ್ಪ ಕಮಕನ್ನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಮತ್ತು ಲಕ್ಷ್ಮಣ್ ಸವದಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಈಗ ಉಳಿದ ಅವಧಿಗಾಗಿ ಉಪ ಚುನಾವಣೆ ನಡೆಯಲಿದೆ.

ಜೂನ್ 30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದೆ. ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಜೂನ್ 20 ಕೊನೆಯ ದಿನವಾಗಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಪೂರ್ಣ ಬಹುಮತ ಹೊಂದಿರುವುದರಿಂದ ನಿರಾಯಾಸವಾಗಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ. ಇನ್ನೂ ಬಿಜೆಪಿ ಅಥವಾ ಜೆಡಿಎಸ್ ನಿಂದ ಅಭ್ಯರ್ಥಿಗಳ ಘೋಷಣೆ ಆಗಿಲ್ಲ. ಅಭ್ಯರ್ಥಿ ಕಣಕ್ಕಿಳಿಸದೇ ಇದ್ದಲ್ಲಿ ಅವಿರೋಧ ಆಯ್ಕೆ ನಡೆಯಲಿದೆ.
ಬಾಬುರಾವ್ ಚುಂಚನಸೂರು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಅವರ ಅವಧಿ 2024ರ ಜೂನ್ 17 ರ ವರೆಗೆ ಇರಲಿದೆ. ಪರಿಷತ್ ಸದಸ್ಯರಾಗಿದ್ದ ಆರ್. ಶಂಕರ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷೇತರ ಸ್ಪರ್ಧೆ ಮಾಡಿದ್ದರು. ಅವರ ಅವಧಿ 2026ರ ಜೂನ್ 30ರ ವರೆಗೂ ಇದೆ. ಲಕ್ಷ್ಮಣ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಅಥಣಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ ಸದಸ್ಯ ಸ್ಥಾನ 2028ರ ಜೂನ್ 14ರ ವರೆಗೆ ಇರಲಿದೆ. ಈಗ ಸವದಿ ಸ್ಥಾನಕ್ಕೆ ಶೆಟ್ಟರ್ ಸ್ಪರ್ಧಿಸಲಿದ್ದಾರೆ. ಆರ್. ಶಂಕರ್ ಜಾಗಕ್ಕೆ ತಿಪ್ಪನಪ್ಪ ಕುಮಕನ್ನೂರು ಸ್ಪರ್ಧೆ ಮಾಡಲಿದ್ದಾರೆ. ಚಿಂಚನಸೂರ್ ಜಾಗಕ್ಕೆ ಬೋಸರಾಜು ಸ್ಪರ್ಧಿಸಲಿದ್ದಾರೆ. ಶೆಟ್ಟರ್ ಅವರನ್ನು ಪರಿಷತ್ತಿನಲ್ಲಿ ಸಭಾಪತಿ ಹುದ್ದೆಗೇರಿಸುವ ಸಾಧ್ಯತೆಯಿದೆ.
The Congress has named former Chief Minister Jagadish Shettar, who lost the recent Assembly election, as a candidate in the upcoming Karnataka legislative council bypolls. Apart from Shettar, Congress has also named Tippannappa Kamaknoor and NS Boseraju as candidates for the MLC bypolls to be held on June 30.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm