ಬ್ರೇಕಿಂಗ್ ನ್ಯೂಸ್
19-06-23 07:01 pm HK News Desk ಕರ್ನಾಟಕ
ಚಿತ್ರದುರ್ಗ, ಜೂ 19: ಕೇಂದ್ರ ಬಿಜೆಪಿ ಸರ್ಕಾರ ಅಕ್ಕಿ ಪೂರೈಕೆ ಮಾಡುವುದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಆರೋಪಕ್ಕೆ ಮಾಡಿತ್ತು. ಈ ಸಂಬಂಧ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ್ದು, ರಾಜ್ಯಗಳು ಕೇಳಿದಂತೆ ಪುಗಸಟ್ಟೆ ರೇಷನ್ ಕೊಡುವುದಕ್ಕೆ ಕೇಂದ್ರ ಸರ್ಕಾರಕ್ಕೆ ಆಗುವುದಿಲ್ಲ. ಎಫ್ಸಿಐಗೆ ರೇಷನ್ ಕೊಡುವ ಕುರಿತು ತನ್ನದೇ ಆದ ಮಾನದಂಡಗಳಿವೆ ಎಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ನೀಡಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಸರ್ಕಾರ 140 ಕೋಟಿ ಜನರ ಭವಿಷ್ಯ ನೋಡಬೇಕಿದೆ. ನಿಮ್ಮ ಕುರ್ಚಿಗಾಗಿ, ನಿಮ್ಮ ತೆವಲಿಗಾಗಿ ಉಚಿತವಾಗಿ ಕೊಟ್ಟರೆ ಹೇಗೆ? ಇದು ನಿಮಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಸರ್ಕಾರ ಯಾವ ಕಾಲದಲ್ಲಿಯೂ ಉಚಿತವಾಗಿ ಯೋಜನೆ ನೀಡುತ್ತೇವೆ ಎಂದು ಹೇಳಿಲ್ಲ. ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ಬಗ್ಗೆ ಹಾಗೂ ಪ್ರಧಾನಿ ಮೋದಿ ಬಗ್ಗೆ ಮಾತನಾಡುವುದನ್ನು ಮೊದಲು ಕೈಬಿಡಬೇಕು. ಬದಲಾಗಿ ನೀವು ರಾಜ್ಯದ ಜನರಿಗೆ ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವ ಕೆಲಸ ಮಾಡಬೇಕು ಎಂದು ನಾರಾಯಣಸ್ವಾಮಿ ಹೇಳಿದರು.
ನಾನು ಒಬ್ಬ ಬಿಜೆಪಿ ಕಾರ್ಯಕರ್ತ ಎನ್ನುವುದಕ್ಕಿಂತ ದೇಶಭಕ್ತ, ನಮಗೆ ಎಲ್ಲ ಸಮಸ್ಯೆಗಳನ್ನು ಎದುರಿಸಿ ದೇಶ ಕಟ್ಟುವ ಶಕ್ತಿ ಇದೆ, ಕಟ್ಟಿ ತೋರಿಸುತ್ತೇವೆ ಎಂದರು. ಇನ್ನು ಬಿಜೆಪಿ ಸರ್ಕಾರ ಬ್ರಿಟೀಷ್ ಆಡಳಿತ ಎಂಬ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ,"ಮಧು ಬಂಗಾರಪ್ಪ ಅವರು ರಾಜಕೀಯದ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಯಬೇಕಿದೆ. ಮಾತನಾಡುವ ಮುನ್ನ ಹಿರಿಯರ ಮಾರ್ಗದರ್ಶನ ಪಡೆದು ಮಾತನಾಡಬೇಕು. ಇಲ್ಲವಾದರೆ ಈ ರಾಜಕೀಯ ವ್ಯವಸ್ಥೆಯಲ್ಲಿ ನೀವು ಮುಳುಗುತ್ತೀರಿ ಎಂದು ಟಾಂಗ್ ನೀಡಿದರು.
Minister Narayanaswamy slams Congress over Anna Bhagya scheme, says centre cannot provide it freely. BJP or Modi has never gauranteed of providing free rice.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm