ಬ್ರೇಕಿಂಗ್ ನ್ಯೂಸ್
20-06-23 07:42 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 20: ಮೈಸೂರು ಸಂಸದ ಪ್ರತಾಪಸಿಂಹ ಬಿ.ಎಲ್. ಸಂತೋಷ್ ಬುಟ್ಟಿಯೊಳಗಿನ ಚೇಳು. ದಿನಕ್ಕೊಂದು ಚೇಳನ್ನು ಸಂತೋಷ್ ಹೊರಗೆ ಬಿಡುತ್ತಿದ್ದಾರೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಇಲಾಖೆ ಸಚಿವ ಎಂ.ಬಿ ಪಾಟೀಲ್ ಹರಿಹಾಯ್ದಿದ್ದಾರೆ.
ಸಂಸದ ಪ್ರತಾಪಸಿಂಹ ಅವರು ಎಂಬಿ ಪಾಟೀಲ್, ಸಿದ್ದರಾಮಯ್ಯರ ಚೇಲಾ ಎಂದು ಹೇಳಿಕೆ ನೀಡಿದ್ದಕ್ಕೆ ತಿರುಗೇಟು ನೀಡಿದ ಪಾಟೀಲ್, ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು. ನಾನು ಕಾಂಗ್ರೆಸ್ ಪಕ್ಷದ ಚೇಲಾ, ಬೇರೆ ಯಾರಿಗೂ ಚೇಲಾ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗಿಂತ ಮುಂಚೆ ನಾನು ಕಾಂಗ್ರೆಸ್ಗೆ ಬಂದವನು. ಆರು ಬಾರಿ ಶಾಸಕ, ಒಂದು ಬಾರಿ ಸಂಸದನಾಗಿ ಕೆಲಸ ಮಾಡಿದ್ದೇನೆ. ಯಾರಿಗೂ ಚೇಲಾ ಮಾಡುವ ಅಗತ್ಯ ನನಗಿಲ್ಲ. ಪ್ರತಾಪ್ ಸಿಂಹಗೆ ಚೇಲಾ ಕೆಲಸ ಮಾಡಿದ ಅನುಭವ ಇರಬೇಕು ಎಂದು ಹೇಳಿದ್ದಾರೆ.

ಇವರು ಚೇಲಾ ಅಂತಾರೆ, ಬಿ ಎಲ್ ಸಂತೋಷ್ ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು. ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡುತ್ತಾರೆ ಅನಿಸುತ್ತದೆ. ಪ್ರತಾಪ್ ಸಿಂಹ ಅವರಿಗೆ ಸದ್ಬುದ್ಧಿ ಕೊಡಲಿ. ಪ್ರತಾಪ್ ಸಿಂಹ ಇದನ್ನೆಲ್ಲ ನಿಲ್ಲಿಸಿ ಅಕ್ಕಿ ಕೊಡಿಸುವ ಕೆಲಸ ಮಾಡಲಿ. ಪ್ರತಾಪ್ ಸಿಂಹ ಇನಿಷಿಯೇಟಿವ್ ತೆಗೆದುಕೊಂಡು ಅಕ್ಕಿ ಕೊಡಿಸುವ ಪ್ರಯತ್ನ ಮಾಡಲಿ ಎಂದರು.

ನನ್ನ ಹೆಗಲ ಮೇಲೆ ಯಾರೂ ಬಂದೂಕು ಇಟ್ಟು ಹೊಡೆಯಬೇಕಿಲ್ಲ. ಯಾರಿಗಾದರೂ ಹೊಡೆಯಬೇಕು ಅಂದರೆ ನಾನೇ ಹೊಡೆಯುತ್ತೇನೆ. ನಾನು ವಿಜಯಪುರದವನು, ಆ ಶಕ್ತಿ ನನಗೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ಮಾಡಿದರು.
ಇಂತಹ ಮಾನಸಿಕ ಸ್ಥಿತಿಯನ್ನು ಪ್ರತಾಪ್ ಸಿಂಹ ಎಲ್ಲಿ ಕಲಿತರೋ. ಪ್ರತಾಪ್ ಸಿಂಹ ಸಂಸದ ಸ್ಥಾನ ಇನ್ನು 10 ತಿಂಗಳು ಅಷ್ಟೇ ಇದೆ. ದಿನವೆಲ್ಲ ಪ್ರತಾಪ್ ಸಿಂಹಗೆ ಉತ್ತರ ಕೊಡುತ್ತಾ ಇರಲು ಆಗಲ್ಲ. ಪ್ರತಾಪ್ ಸಿಂಹ ಮನಸ್ಥಿತಿ ಬಗ್ಗೆ ಪಾಪ ಅನಿಸುತ್ತೆ. ಎಲ್ಲ ಜಾತಿಯ ಜನರನ್ನು ಒಟ್ಟಾಗಿ ಕೊಂಡೊಯ್ಯುವ ಹಿನ್ನೆಲೆ ನಮ್ಮದು. ಎಂ.ಬಿ.ಪಾಟೀಲ್ ಬಳಿ ಇರೋದು ಚಿಲ್ಲರೆ ಖಾತೆ ಎಂದು ಹೇಳಿದ್ದಾರೆ. ಬೃಹತ್ ಕೈಗಾರಿಕೆ ಚಿಲ್ಲರೆ ಖಾತೆಯಾ ಎಂಬುದನ್ನು ಪ್ರಧಾನಿ ಬಳಿ ಕೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಪ್ರತಾಪ್ ಸಿಂಹ ವಿರುದ್ಧ ಟ್ಟೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಎಲ್ ಸಂತೋಷನ ಮೌತ್ ಪೀಸ್ ಪ್ರತಾಪ್ ಸಿಂಹ ಅವರೇ ನಮ್ಮ ಸರ್ಕಾರದ, ನಮ್ಮ ಸಿಎಂ ಬಗ್ಗೆ ತಲೆ ಕೆಡಿಸಿಕೊಳ್ಳುವುದಕ್ಕಿಂತ ನಿಮ್ಮ ವಿರೋಧ ಪಕ್ಷದ ನಾಯಕನನ್ನು ಮೊದಲು ಆಯ್ಕೆ ಮಾಡಿಕೊಳ್ಳಿ. ಮೈಸೂರಿನ ಸಂಸದನಾಗಿ ಜಿಲ್ಲೆಯಲ್ಲಿ ಎಷ್ಟು ಬಿಜೆಪಿ ಶಾಸಕರನ್ನು ಗೆಲ್ಲಿಸಿದ್ದೀರಿ? ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣರಾದ ಬಿಎಲ್ ಸಂತೋಷ್ ಅವರನ್ನು ಟೀಕಿಸುವ ಮಿನಿಮಮ್ ದಮ್ಮು ತಾಕತ್ತು ಇದೆಯೇ? ಎಂದು ಪ್ರಶ್ನಿಸಿದೆ.
Mysuru MP Pratap simha is a scorpion created by BL Santosh slams MB Patil.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 01:46 pm
HK News Desk
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 02:28 pm
Bangalore Correspondent
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm