ಮಂಡ್ಯ ; ಟಾಟಾ ಕಾರು - ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ, ಮೂವರ ಬಲಿ 

20-06-23 08:48 pm       HK News Desk   ಕರ್ನಾಟಕ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಡ್ಯ, ಜೂನ್ 20: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ಟಾಟಾ ಹೆಕ್ಸಾ ಹಾಗೂ ಸ್ವಿಫ್ಟ್ ಡಿಜೈರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಸ್ವಿಫ್ಟ್ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

Maddur: Three killed as car jumps divider, collides with cab on Bengaluru-Mysuru  Expressway | News9live

ಮೃತರನ್ನು ಉತ್ತರ ಪ್ರದೇಶದ 50 ವರ್ಷದ ನೀರಜ್ ಕುಮಾರ್ ಅವರ ಪತ್ನಿ 47 ವರ್ಷದ ಸೆಲ್ವಿ ಮತ್ತು ಮಂಡ್ಯದ ಕಾರು ಚಾಲಕ 35 ವರ್ಷದ ನಿರಂಜನ್ ಎಂದು ತಿಳಿದುಬಂದಿದೆ. ನೀರಜ್ ಕುಮಾರ್ ಹಾಗೂ ಪತ್ನಿ ಬೆಂಗಳೂರಿನಿಂದ ಮೈಸೂರಿಗೆ ಬಾಡಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. 

ಅಪಘಾತದಲ್ಲಿ ಟಾಟಾ ಹೆಕ್ಸಾ ಕಾರಿನಲ್ಲಿದ್ದ ಪತಿ-ಪತ್ನಿಗೆ ಗಂಭೀರ ಗಳಾಗಿದ್ದು ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

Three persons, including an Uttar Pradesh government official, died in a road accident on the Mysuru-Bengaluru expressway near Maddur on Tuesday, when their car struck the divider and collided with another vehicle traveling towards Mysuru. The victims have been identified as Neeraj Kumar (50), his wife Selvi Kumar (47), and driver Niranjan Kumar (35). Neeraj and Selvi were traveling in a Maruti Suzuki Swift towards Mysuru, while Niranjan was the cab driver.