ಬ್ರೇಕಿಂಗ್ ನ್ಯೂಸ್
21-06-23 05:34 pm HK News Desk ಕರ್ನಾಟಕ
ಮಂಡ್ಯ, ಜೂನ್ 21: ಠಾಣೆಯಲ್ಲಿ ಎಸ್ಐ ಆಗಿದ್ದ ಬಿ.ಎಸ್.ವೆಂಕಟೇಶ್ ಅವರು ತನ್ನ ಮಗಳೂ ಆದ ನೂತನ ಎಸ್ಐ ಬಿ.ವಿ.ವರ್ಷಾ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ ಎನ್ನಿಸಿಕೊಂಡಿತು. ಇದಕ್ಕೆ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು. ಮಾತ್ರವಲ್ಲದೆ ಸಿಬ್ಬಂದಿ ಮತ್ತು ಅಲ್ಲಿಗೆ ಆಗಮಿಸಿದ ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
ವೆಂಕಟೇಶ್ ಅವರು ತುಮಕೂರು ಜಿಲ್ಲೆ ಹುಲಿಯೂರು ದುರ್ಗದವರು. 16 ವರ್ಷಗಳ ಕಾಲ ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಪಾಕಿಸ್ತಾನ, ಚೀನಾ, ಬಾಂಗ್ಲಾದೇಶದ ಗಡಿಯಲ್ಲಿ ಕರ್ತವ್ಯ ನಿರ್ವಹಿಸಿದ ಜತೆಗೆ ಕಾರ್ಗಿಲ್ ಯುದ್ಧದಲ್ಲೂ ಭಾಗಿಯಾಗಿದ್ದ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ಇನ್ನು ಇವರನ್ನು ಮಿಲ್ಟ್ರಿ ಮ್ಯಾನ್ ಎಂತಲೂ ಕರೆಯಲಾಗುತ್ತದೆ. ಮಿಲಿಟರಿ ಸೇವೆಯಿಂದ ನಿವೃತ್ತರಾದ ಬಳಿಕ ಪಿಎಸ್ಐ ಪರೀಕ್ಷೆ ಪಡೆದು ಮಿಲಿಟರಿ ಕೋಟಾದಡಿ 2010ರ ಬ್ಯಾಚ್ನ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ 2ನೇ ವೃತ್ತಿ ಜೀವನ ಆರಂಭಿಸಿದ್ದರು. ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಯ ಹಲವೆಡೆ ಕರ್ತವ್ಯ ನಿರ್ವಹಿಸಿ, ಮತ್ತೆ ಮಂಡ್ಯಕ್ಕೆ ಬಂದು ಸೆಂಟ್ರಲ್ ಠಾಣೆಗೆ ಒಂದೂವರೆ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಸ್ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಇನ್ನು 2022ರ ಬ್ಯಾಚ್ನಲ್ಲಿ ಪಿಎಸ್ಐ ಆಗಿರುವ ವರ್ಷಾ ಅವರು ಕಲುಬುರಗಿಯಲ್ಲಿ ತರಬೇತಿ ಮುಗಿಸಿ, ಮಂಡ್ಯದಲ್ಲೇ 1 ವರ್ಷ ಪ್ರೊಬೆಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಈಗ ಅವರ ಮೊದಲ ನಿಯೋಜನೆ ಕೂಡ ಮಂಡ್ಯದಲ್ಲೇ ಆಗಿದೆ. ಅದೂ ಕೂಡ ಅದೃಷ್ಟವೆಂಬಂತೆ ತನ್ನ ತಂದೆ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಗೆ ಸಿಕ್ಕಿದೆ. ಅಂತೆಯೇ ಠಾಣೆಯಲ್ಲಿ ತಂದೆಯಿಂದಲೇ ಅಧಿಕಾರ ಪಡೆದುಕೊಂಡು ಪೊಲೀಸ್ ವೃತ್ತಿಜೀವನ ಆರಂಭಿಸಿದ್ದಾರೆ. ಇವರು ಅರ್ಥಶಾಸ್ತ್ರದಲ್ಲಿ ಎಂಎ ಪದವಿ ಪಡೆದಿದ್ದಾರೆ.
ಮಿಲ್ಟ್ರಿ ಮ್ಯಾನ್ ಅಪ್ಪನೇ ಎಲ್ಲಕ್ಕೂ ಸ್ಫೂರ್ತಿ ;
ತಂದೆ ಕೈಯಿಂದ ಅಧಿಕಾರ ಪಡೆದ ಪಿಎಸ್ಐ ವರ್ಷಾ, ನನ್ನ ತಂದೆಯೇ ನನ್ನ ಜೀವನದ ಹೀರೋ. ಅವರು ಮಾಡುತ್ತಿದ್ದ ಕೆಲಸವೇ ನನಗೆ ಪ್ರೇರಣೆ. 16 ವರ್ಷಗಳ ಕಾಲ ನನ್ನ ತಂದೆ ದೇಶ ಸೇವೆಯಲ್ಲಿ ತೊಡಗಿದ್ರು. 2010 ರಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಅವರ ಕರ್ತವ್ಯ ನಿಷ್ಠೆ ನನಗೆ ಸ್ಪೂರ್ತಿ. ನಾನು ಕೂಡ ಅವರಂತೆ ಉತ್ತಮ ಕೆಲಸ ನಿರ್ವಹಿಸಿ ಒಳ್ಳೆ ಹೆಸರು ಸಂಪಾದಿಸುವೆ. ನೊಂದ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇನೆ. ತಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಸೆಂಟ್ರಲ್ ಪೊಲೀಸ್ ಠಾಣೆಗೆ ನಾನು ಪಿಎಸ್ಐಯಾಗಿ ನೇಮಕಗೊಂಡಿದ್ದೇನೆ. ಇಂದು ನನ್ನ ಮನಸ್ಸಿಗೆ ತುಂಬಾ ಖುಷಿಯಾಗಿದೆ ಎಂದು ವರ್ಷಾ ಭಾವುಕರಾದ್ರು.
In a rare instance, a woman police sub-inspector (PSI) took charge of Mandya Central police station on Wednesday from her own father. It was a proud moment for PSI Venkatesh when his own daughter came as a PSI to the station where he was on duty. He had been working as a PSI at the Mandya Central police station for the past one year.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 06:06 pm
Mangalore Correspondent
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm