ಬ್ರೇಕಿಂಗ್ ನ್ಯೂಸ್
22-06-23 08:27 pm HK News Desk ಕರ್ನಾಟಕ
ಬೆಂಗಳೂರು, ಜೂನ್ 22: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ ವಹಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗುರುವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸುದ್ದಿಗಾರರ ಜತೆ ಮಾತನಾಡಿದ ಡಾ.ಅಲೋಕ್ ಮೋಹನ್, ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಲಹೆ-ಸೂಚನೆ ನೀಡಲಾಗಿದೆ.
ಠಾಣೆಗಳಿಗೆ ಬರುವ ಜನರೊಂದಿಗೆ ಪೊಲೀಸರು ಸೌಜನ್ಯಯುತವಾಗಿ ವರ್ತಿಸಬೇಕು. ಈಗಾಗಲೇ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್ ಮತ್ತು ಹೆಸರು ಸಮೇತ ಫಲಕಗಳ ಅಳವಡಿಕೆಗೆ ಆದೇಶಿಸಲಾಗಿದೆ. ತಿಂಗಳಲ್ಲಿ ಅಥವಾ ವಾರದಲ್ಲಿ ಒಮ್ಮೆಯಾದರೂ ಠಾಣೆಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಎಸ್ಪಿಗಳಿಗೆ, ನಗರದ ಡಿಸಿಪಿ ಮತ್ತು ಎಸಿಪಿಗಳಿಗೆ ಸಹ ಸೂಚಿಸಲಾಗಿದೆ.
ಕೆಲವು ಪೊಲೀಸ್ ಠಾಣೆಗಳಲ್ಲಿ ನಾಮಫಲಕ ಹಾಕದ ಬಗ್ಗೆ ದೂರುಗಳು ಬಂದಿವೆ. ಈ ಉದಾಸೀನತೆ ಮುಂದುವರಿದರೇ ಅಶಿಸ್ತು ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ನಾನು ಸಹ ಆಯ್ದ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತೇನೆ ಎಂದು ಡಿಜಿಪಿ ಡಾ. ಅಲೋಕ್ ಮೋಹನ್, ಮುನ್ನೆಚ್ಚರಿಕೆ ಕೊಟ್ಟಿದ್ದಾರೆ.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಆಯುಕ್ತರಾದ ಸತೀಶ್ ಕುಮಾರ್, ರಮಣ ಗುಪ್ತಾ, ಜಂಟಿ ಆಯುಕ್ತರಾದ ಡಾ.ಎಸ್.ಡಿ. ಶರಣಪ್ಪ ಮತ್ತು ಎಂ.ಎನ್. ಅನುಚೇತ್ ಸೇರಿದಂತೆ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.
Treat public coming to Police station with respect, DCPs, SPs in Karnataka should visit one police station every day says DG Alok Mohan. I too will give surprise visits to police station any officer found irresponsible in thier work strict action will be implemented he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm