ಬ್ರೇಕಿಂಗ್ ನ್ಯೂಸ್
22-06-23 08:27 pm HK News Desk ಕರ್ನಾಟಕ
ಬೆಂಗಳೂರು, ಜೂನ್ 22: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ಮೇಲೆ ನಿಗಾ ವಹಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಎಚ್ಚರಿಕೆ ನೀಡಿದ್ದಾರೆ.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗುರುವಾರ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸುದ್ದಿಗಾರರ ಜತೆ ಮಾತನಾಡಿದ ಡಾ.ಅಲೋಕ್ ಮೋಹನ್, ಜಾಲತಾಣಗಳಲ್ಲಿ ಬರುವ ಸುಳ್ಳು ಸುದ್ದಿಗಳ ಮೇಲೆ ವಿಶೇಷ ನಿಗಾವಹಿಸಲಾಗುತ್ತದೆ. ಇದಕ್ಕಾಗಿ ಪ್ರತ್ಯೇಕ ತಂಡ ರಚನೆ ಮಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರ ವ್ಯವಸ್ಥೆ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಸಲಹೆ-ಸೂಚನೆ ನೀಡಲಾಗಿದೆ.
ಠಾಣೆಗಳಿಗೆ ಬರುವ ಜನರೊಂದಿಗೆ ಪೊಲೀಸರು ಸೌಜನ್ಯಯುತವಾಗಿ ವರ್ತಿಸಬೇಕು. ಈಗಾಗಲೇ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಮೊಬೈಲ್ ನಂಬರ್ ಮತ್ತು ಹೆಸರು ಸಮೇತ ಫಲಕಗಳ ಅಳವಡಿಕೆಗೆ ಆದೇಶಿಸಲಾಗಿದೆ. ತಿಂಗಳಲ್ಲಿ ಅಥವಾ ವಾರದಲ್ಲಿ ಒಮ್ಮೆಯಾದರೂ ಠಾಣೆಗಳಿಗೆ ಭೇಟಿ ನೀಡುವಂತೆ ಜಿಲ್ಲಾ ಎಸ್ಪಿಗಳಿಗೆ, ನಗರದ ಡಿಸಿಪಿ ಮತ್ತು ಎಸಿಪಿಗಳಿಗೆ ಸಹ ಸೂಚಿಸಲಾಗಿದೆ.
ಕೆಲವು ಪೊಲೀಸ್ ಠಾಣೆಗಳಲ್ಲಿ ನಾಮಫಲಕ ಹಾಕದ ಬಗ್ಗೆ ದೂರುಗಳು ಬಂದಿವೆ. ಈ ಉದಾಸೀನತೆ ಮುಂದುವರಿದರೇ ಅಶಿಸ್ತು ತೋರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ನಾನು ಸಹ ಆಯ್ದ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತೇನೆ ಎಂದು ಡಿಜಿಪಿ ಡಾ. ಅಲೋಕ್ ಮೋಹನ್, ಮುನ್ನೆಚ್ಚರಿಕೆ ಕೊಟ್ಟಿದ್ದಾರೆ.
ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, ಹೆಚ್ಚುವರಿ ಆಯುಕ್ತರಾದ ಸತೀಶ್ ಕುಮಾರ್, ರಮಣ ಗುಪ್ತಾ, ಜಂಟಿ ಆಯುಕ್ತರಾದ ಡಾ.ಎಸ್.ಡಿ. ಶರಣಪ್ಪ ಮತ್ತು ಎಂ.ಎನ್. ಅನುಚೇತ್ ಸೇರಿದಂತೆ ಎಲ್ಲ ಡಿಸಿಪಿಗಳು ಉಪಸ್ಥಿತರಿದ್ದರು.
Treat public coming to Police station with respect, DCPs, SPs in Karnataka should visit one police station every day says DG Alok Mohan. I too will give surprise visits to police station any officer found irresponsible in thier work strict action will be implemented he added.
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 04:18 pm
HK News Staffer
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
13-03-26 10:04 pm
Mangaluru Staffer
ಬಿಲ್ ಕಟ್ಟದ ನೆಪದಲ್ಲಿ ಕೊರಗ ಸಮುದಾಯಕ್ಕೆ ನೀರಿನ ಸಂಪ...
13-03-26 09:58 pm
ರಸ್ತೆ ಬದಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಜರುಗಿ...
13-03-26 09:38 pm
ಭ್ರಷ್ಟ ಅಬಕಾರಿ ಡೀಸಿ ಶ್ರೀನಿವಾಸ್ ; ಲೋಕಾಯುಕ್ತ ದಾಳ...
13-03-26 08:27 pm
Shiradi Ghat Accident, Mangalore: ಶಿರಾಡಿ - ಗು...
13-03-26 05:41 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm