ಬ್ರೇಕಿಂಗ್ ನ್ಯೂಸ್
22-06-23 10:39 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 22: ಅಮೆರಿಕಕ್ಕೆ ತೆರಳಲು ವೀಸಾ ಪಡೆಯಬೇಕಿದ್ದರೆ ಈಗ ಚೆನ್ನೈಯಲ್ಲಿರುವ ಅಮೆರಿಕ ಕಾನ್ಸುಲೇಟ್ ಅಥವಾ ರಾಯಭಾರ ಕಚೇರಿಗೆ ತೆರಳಿ ಸಂದರ್ಶನ ಹಾಗೂ ಇತರ ಪ್ರಕ್ರಿಯೆಗಳನ್ನು ಪೂರೈಸಬೇಕಾಗುತ್ತದೆ. ಆದರೆ ಇನ್ನು ಮುಂದೆ ಅದರ ಅಗತ್ಯವಿಲ್ಲ. ಬೆಂಗಳೂರಿನಲ್ಲೇ ವೀಸಾ ಪಡೆಯುವ ಪ್ರಕ್ರಿಯೆಗಳನ್ನು ಪೂರೈಸಬಹುದು, ಹೌದು, ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಹೊಸದಾಗಿ ದೂತಾವಾಸ ಕಚೇರಿ ಆರಂಭಿಸುವುದಾಗಿ ಅಮೆರಿಕ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ಸಂದರ್ಭದಲ್ಲೇ ಅಲ್ಲಿನ ಸರ್ಕಾರ ಈ ಘೋಷಣೆ ಮಾಡಿದೆ. ಇದರೊಂದಿಗೆ, ಕನ್ನಡಿಗರ ಬಹುದಿನಗಳ ಕನಸೊಂದು ನನಸಾಗುವ ಕಾಲ ಸನ್ನಿಹಿತವಾಗಿದೆ.
ಈ ಮಧ್ಯೆ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಆರಂಭಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಗುರುವಾರ ಧನ್ಯವಾದ ಅರ್ಪಿಸಿದ್ದಾರೆ.
ಅಮೆರಿಕವು ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಎರಡು ಹೊಸ ಕಾನ್ಸುಲೇಟ್ಗಳನ್ನು ತೆರೆಯಲಿದೆ. ಅದೇ ರೀತಿ ಭಾರತ ಸಿಯಾಟಲ್ನಲ್ಲಿ ಕಚೇರಿ ತೆರೆಯಲಿದ್ದು, ಜನರ ನಡುವಿನ ಬಾಂಧವ್ಯ ಹೆಚ್ಚಳಕ್ಕೆ ನೆರವಾಗಲಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಕಳೆದ ವರ್ಷ ಅಮೆರಿಕವು ಭಾರತೀಯ ವಿದ್ಯಾರ್ಥಿಗಳಿಗೆ ದಾಖಲೆಯ 1,25,000 ವೀಸಾಗಳನ್ನು ನೀಡಿದೆ. ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಕಳೆದ ವರ್ಷವೊಂದರಲ್ಲೇ ಶೇಕಡಾ 20 ರಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ಅಮೆರಿಕದಲ್ಲಿ ಅತಿದೊಡ್ಡ ವಿದೇಶಿ ವಿದ್ಯಾರ್ಥಿ ಸಮುದಾಯವಾಗಿ ಭಾರತೀಯ ವಿದ್ಯಾರ್ಥಿ ಸಮುದಾಯ ಹೊರಹೊಮ್ಮಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು ಮತ್ತು ಅಹಮದಾಬಾದ್ನಲ್ಲಿ ಹೊಸ ಕಾನ್ಸುಲೇಟ್ಗಳನ್ನು ತೆರೆಯಲು ಅಮೆರಿಕ ಉದ್ದೇಶಿಸಿದೆ. ಭಾರತವು 2023 ರಲ್ಲಿ ಸಿಯಾಟಲ್ನಲ್ಲಿ ದೂತಾವಾಸ ಕಚೇರಿ ತೆರೆಯುವುದನ್ನು ಅಮೆರಿಕ ಎದುರು ನೋಡುತ್ತಿದೆ ಎಂದು ಅವರು ಹೇಳಿದ್ದಾರೆ.
The United States will open two new consulates in Bengaluru and Ahmedabad, to boost people-to-people relationships, a senior White House official said. The official said the US issued a record 125,000 visas to Indian students last year. Indian students are set to become the largest foreign student community in the United States with a 20 per cent increase last year alone, the senior administration official said.
03-05-24 05:15 pm
HK News Desk
Revanna kidnap, rape, Prajwal: ಮಾಜಿ ಸಚಿವ ಎಚ್....
03-05-24 04:29 pm
Bengalore rain, Karnataka: ಬಿಸಿಲ ಝಳಕ್ಕೆ ‘ಬೆಂದ...
03-05-24 04:24 pm
Madhu Bangarappa, Rahul Gandhi: ರಾಹುಲ್ ಗಾಂಧಿ...
03-05-24 03:58 pm
Prajwal Revanna, Rape case: ಪ್ರಜ್ವಲ್ ರೇವಣ್ಣ ವ...
03-05-24 10:34 am
03-05-24 10:28 am
HK News Desk
Dubai Rain: ದುಬೈನಲ್ಲಿ ಮತ್ತೆ ಭಾರಿ ಮಳೆ ; ಶಾಲೆ,...
03-05-24 10:20 am
Narendra Modi, Rahul Gandhi: ರಾಹುಲ್ ಬಗ್ಗೆ ಪಾಕ...
02-05-24 10:07 pm
Hindu Marriage, Supreme court: ಹಿಂದು ವಿವಾಹ ಎನ...
02-05-24 09:25 pm
Senator Danesh Kumar Palyani ; ಪಾಕಿಸ್ತಾನದಲ್ಲಿ...
01-05-24 10:25 pm
02-05-24 07:52 pm
Mangalore Correspondent
Mangalore Yesuraj, AEO, Kukke Subrahmanya Tem...
02-05-24 02:24 pm
Mangalore News, Konaje, Baby: ಐದು ತಿಂಗಳ ಹಸುಗೂ...
01-05-24 08:55 pm
Hot sun heat, Mangalore temperature; ಕರಾವಳಿಯಲ...
01-05-24 11:43 am
Mangalore Super gold and diamound showroom, T...
30-04-24 08:04 pm
03-05-24 03:21 pm
Bangalore Correspondent
Mumbai crime, Minor pregnant: ಮದುವೆ ಮುನ್ನವೇ 2...
03-05-24 10:24 am
Mangalore Crime, Drugs Arrest; ಕೋಟೆಕಾರ್ ಬೀರಿಯ...
01-05-24 10:18 pm
Mangalore crime, Court: ಮೆಲ್ಕಾರ್ ಬಳಿ ಕೋಮು ದ್ವ...
01-05-24 06:44 pm
Cyber Fraud, Online Crime: ಹೀಗೂ ಮೋಸ ಮಾಡ್ತಾರೆ,...
30-04-24 10:16 pm