ಬ್ರೇಕಿಂಗ್ ನ್ಯೂಸ್
23-06-23 04:13 pm HK News Desk ಕರ್ನಾಟಕ
ಹಿರಿಯೂರು, ಜೂನ್ 23: ಹಿರಿಯೂರು ತಾಲೂಕಿನ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿಯಲ್ಲಿದ್ದ 9 ದನಗಳು ಸ್ಥಳದಲ್ಲಿಯೇ ಸಾವನ್ನಪ್ಪಿವೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಎನ್ಎಚ್-4 ರಸ್ತೆಯ ಕೆಆರ್ ಹಳ್ಳಿ ಗೇಟ್ ಬಳಿ ಇರುವ ಬೈನರಿ ಗಾರ್ಮೆಂಟ್ಸ್ ಸಮೀಪ ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ. ಮಹಾರಾಷ್ಟ್ರದಿಂದ ಕೋಲಾರ ಕಡೆಗೆ ದನಗಳನ್ನು ತುಂಬಿಕೊಂಡು ಹೋಗುತ್ತಿದ್ದ ಈಚರ್ ಲಾರಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಲಾರಿಯಲ್ಲಿದ್ದ 10 ದನಗಳ ಪೈಕಿ 7 ದನಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. 2 ದನಗಳು ಗಂಭೀರವಾಗಿ ಗಾಯಗೊಂಡಿದ್ದವು. ಆದರೆ, ಅವು ಕೂಡ ಈಗ ಸಾವನ್ನಪ್ಪಿದ್ದು, ಒಂದು ಗೋವು ಮಾತ್ರ ಆರೋಗ್ಯವಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಹಿರಿಯೂರು ನಗರದಲ್ಲಿ ಹರಿಯಾಣ ಮೂಲದ 7 ಜನರ ತಂಡವೊಂದು ಗೋವುಗಳನ್ನು ಹಿಡಿದು ಟೆಂಪೋಗೆ ತುಂಬಿಕೊಂಡು ಹೋಗುತ್ತಿದ್ದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಪದೇ ಪದೇ ಗೋವುಗಳ ಅಕ್ರಮ ಸಾಗಾಟ ನಡೆಯುತ್ತಿದ್ದು, ಈ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.
Chitradurga 9 cattle killed in spot after truck accident near hiriyur.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm