ಚಾಮರಾಜನಗರ ; ಆಸ್ತಿ ವಿಚಾರಕ್ಕೆ ಗಲಾಟೆ, ಒಂದೇ ಮನೆಯ ಮೂವರು ಆತ್ಮಹತ್ಯೆ !

23-06-23 07:01 pm       HK News Desk   ಕರ್ನಾಟಕ

ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ‌ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ, ಜೂನ್ 23: ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲೂಕಿನ‌ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಮಹದೇವಸ್ವಾಮಿ(48), ಸವಿತಾ, (40), ಸಿಂಚನಾ(13) ಆತ್ಮಹತ್ಯೆಗೆ ಶರಣಾದವರು. ಮೂವರ ಮೃತದೇಹ ಇಂದು ಬೆಳಗ್ಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದರಿಂದ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರ‌ ಕಾರಣ ತಿಳಿದುಬಂದಿಲ್ಲ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ಮಾಡಿ ತನಿಖೆ ಕೈಗೊಂಡಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

In a distressing incident that unfolded this morning, the lifeless bodies of a father, mother, and their teenage daughter were discovered in their residence in Bedarpur village, located in Chamarajanagar taluk.