ಬ್ರೇಕಿಂಗ್ ನ್ಯೂಸ್
24-06-23 02:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಆರ್. ಅಶೋಕ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಇದ್ದಾರೆ. ಸೋಮಣ್ಣ ಹೇಳಿಕೆ ಬಗ್ಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ. ಸದ್ಯಕ್ಕೆ ನಳಿನ್ ಕುಮಾರ್ರನ್ನು ಅಧ್ಯಕ್ಷ ಸ್ಥಾನದಿಂದ ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಲೋಕಸಭೆ ಚುನಾವಣೆ ಇದೆ, ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷ, ದೆಹಲಿ ನಾಯಕರು ಅಂಗೀಕಾರ ಮಾಡಬೇಕಲ್ವಾ? ಲೋಕಸಭೆ ಚುನಾವಣೆ ಇದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಅಶೋಕ್ ಹೇಳಿದ್ದಾರೆ.


ಇದೇ ವೇಳೆ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಮಾತನಾಡಿದ ಅಶೋಕ್, ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ ಎಂದರು. ನಂತರ ಕಾಂಗ್ರೆಸ್ ಬಗ್ಗೆ ಕಿಡಿಕಾರಿದ ಅವರು, 'ಡಿ ಕೆ ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ. ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗುವುದಿಲ್ಲ ಎನ್ನುವ ಗ್ಯಾರಂಟಿಯಿದೆ. ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಯಾರಿಗೆ ಹೇಳಿದ್ದಾರೆ, ಅದು ಡಿಕೆಶಿಗೆ ಹೇಳಿದ್ದು ಎಂದು ಜಗಜ್ಜಾಹೀರು ಎಂದು ಅಶೋಕ್ ಹೇಳೀದರು.
ಡಿಕೆ ಶಿವಕುಮಾರ್ ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಕಿರಿಕಿರಿ ಬೀದಿಗೆ ಬಂದರೆ ಈ ಸರ್ಕಾರ ಬಿದ್ದು ಹೋಗುತ್ತದೆ. ಸಿಎಂ ಆದವರು ಹಿಂದಿನ ಸಿಎಂರನ್ನು ಭೇಟಿ ಮಾಡುವುದು ಮಾಮೂಲಿ. ನಾನು ಡಿಸಿಎಂ ಆಗಿದ್ದೆ, ಆದರೆ ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ ಎಂದು ಅಶೋಕ್ ಹೇಳಿದರು.
R Ashok says no possibilities of removing Nalin Kateel from State President post in BJP. Rumors spread stating Nalin Kateel has resigned the post but later BJP has clarified it to be fake.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm