ಬ್ರೇಕಿಂಗ್ ನ್ಯೂಸ್
24-06-23 02:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಟೀಲ್ ರಾಜಿನಾಮೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ಆರ್ ಅಶೋಕ್ , 'ಹೈಕಮಾಂಡ್ ಅಂಗೀಕಾರ ಮಾಡಬೇಕಲ್ವಾ' ಎಂದು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ಆರ್. ಅಶೋಕ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ಇದ್ದಾರೆ. ಸೋಮಣ್ಣ ಹೇಳಿಕೆ ಬಗ್ಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಇಲ್ಲ. ಸದ್ಯಕ್ಕೆ ನಳಿನ್ ಕುಮಾರ್ರನ್ನು ಅಧ್ಯಕ್ಷ ಸ್ಥಾನದಿಂದ ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಲೋಕಸಭೆ ಚುನಾವಣೆ ಇದೆ, ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ನಮ್ಮದು ರಾಷ್ಟ್ರೀಯ ಪಕ್ಷ, ದೆಹಲಿ ನಾಯಕರು ಅಂಗೀಕಾರ ಮಾಡಬೇಕಲ್ವಾ? ಲೋಕಸಭೆ ಚುನಾವಣೆ ಇದೆ, ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ ಎಂದು ಅಶೋಕ್ ಹೇಳಿದ್ದಾರೆ.


ಇದೇ ವೇಳೆ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಮಾತನಾಡಿದ ಅಶೋಕ್, ಜುಲೈ 3ರಂದು ವಿಪಕ್ಷ ನಾಯಕನ ಬಗ್ಗೆ ಘೋಷಣೆ ಮಾಡುತ್ತಾರೆ ಎಂದರು. ನಂತರ ಕಾಂಗ್ರೆಸ್ ಬಗ್ಗೆ ಕಿಡಿಕಾರಿದ ಅವರು, 'ಡಿ ಕೆ ಶಿವಕುಮಾರ್ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ. ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ. ಸಿದ್ದರಾಮಯ್ಯ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗುವುದಿಲ್ಲ ಎನ್ನುವ ಗ್ಯಾರಂಟಿಯಿದೆ. ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದೇನು ಸಮ್ಮಿಶ್ರ ಸರ್ಕಾರವೇ ಎಂದು ಯಾರಿಗೆ ಹೇಳಿದ್ದಾರೆ, ಅದು ಡಿಕೆಶಿಗೆ ಹೇಳಿದ್ದು ಎಂದು ಜಗಜ್ಜಾಹೀರು ಎಂದು ಅಶೋಕ್ ಹೇಳೀದರು.
ಡಿಕೆ ಶಿವಕುಮಾರ್ ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಕಿರಿಕಿರಿ ಬೀದಿಗೆ ಬಂದರೆ ಈ ಸರ್ಕಾರ ಬಿದ್ದು ಹೋಗುತ್ತದೆ. ಸಿಎಂ ಆದವರು ಹಿಂದಿನ ಸಿಎಂರನ್ನು ಭೇಟಿ ಮಾಡುವುದು ಮಾಮೂಲಿ. ನಾನು ಡಿಸಿಎಂ ಆಗಿದ್ದೆ, ಆದರೆ ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ ಎಂದು ಅಶೋಕ್ ಹೇಳಿದರು.
R Ashok says no possibilities of removing Nalin Kateel from State President post in BJP. Rumors spread stating Nalin Kateel has resigned the post but later BJP has clarified it to be fake.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm