ಬ್ರೇಕಿಂಗ್ ನ್ಯೂಸ್
24-06-23 03:54 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 24: ನಾನು ರಾಮನಗರ ಜಿಲ್ಲಾ ಉಸ್ತುವಾರಿ ಆದಾಗ, ನಿನಗೂ ರಾಮನಗರಕ್ಕೂ ಏನು ಸಂಬಂಧ ಅಂತಾ ಡಿಕೆ ಶಿವಕುಮಾರ್ ಕೇಳಿದ್ರು. ಈಗ ನಾನು ಕೇಳ್ತೀನಿ, ನಿನಗೂ ಬೆಂಗಳೂರಿಗೂ ಏನಪ್ಪ ಸಂಬಂಧ ಶಿವಕುಮಾರ? ಎಂದು ಏಕವಚನದಲ್ಲಿಯೇ ಮಾಜಿ ಡಿಸಿಎಂ ಡಾ ಸಿಎನ್ ಅಶ್ವತ್ಥ ನಾರಾಯಣ ಹಾಲಿ ಡಿಸಿಎಂ ಡಿಕೆ ಶಿವಕುಮಾರ್ಗೆ ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ನನ್ನ ಪೂರ್ವಿಕರ ಜಿಲ್ಲೆ. ನನಗೆ ಕೇಳಿದ ಹಾಗೇ ನಿನಗೂ ಕೇಳ್ತಿದೀನಿ. ನಿನಗೂ ಬೆಂಗಳೂರಿಗೆ ಏನು ಸಂಬಂಧ ಶಿವಕುಮಾರ? ಬೆಂಗಳೂರಿಗೆ ನಿಮ್ಮಿಂದ ನಯಾಪೈಸೆ ಲಾಭ ಇಲ್ಲ. ನಿಮ್ಮನ್ನು ಜನ ಕಳೆದ 35 ವರ್ಷಗಳಿಂದ ನೋಡಿದ್ದಾರೆ. ಡಿಕೆ ಶಿವಕುಮಾರ್ ಅಂದ್ರೆ ಏನು, ಯಾರು ಎಂಬುದನ್ನು ಜನ ನೋಡಿದ್ದಾರೆ. ನಿಮ್ಮಿಂದ ಏನು ಆಗಲ್ಲ, ನಿಮಗೆ ಜನರ ಮೇಲೆ ಕಾಳಜಿ ಇಲ್ಲ ಎಂದು ಕಿಡಿಕಾರಿದರು.
![]()
ಡಿಕೆ ಶಿವಕುಮಾರ್ ರಿಯಲ್ ಎಸ್ಟೇಟ್ ವ್ಯಾಪಾರಿ, ಅವರಿಂದ ಬೆಂಗಳೂರಿಗೆ ಉಪಯೋಗ ಆಗಲ್ಲ. ಡಿಕೆ ಶಿವಕುಮಾರ್ ಅವರದ್ದು ದ್ವೇಷದ ರಾಜಕಾರಣ, ವೇಷದ ರಾಜಕಾರಣ. ಡಿಕೆ ಶಿವಕುಮಾರ್ ಅಂದ್ರೆ ದ್ವೇಷ, ಡಿಕೆ ಶಿವಕುಮಾರ್ ಅಂದ್ರೆ ಅಸೂಯೆ, ಕಿರುಕುಳ ಎಂದು ಡಾ ಸಿಎನ್ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳ ಜಾರಿ ವಿಳಂಬದ ಬಗ್ಗೆ ಮಾತನಾಡಿದ ಸಿಎನ್ ಅಶ್ವತ್ಥ ನಾರಾಯಣ, ಕಾಂಗ್ರೆಸ್ನವರು ಮಾತು ತಪ್ಪುತ್ತಿದ್ದಾರೆ. ಅವರು ನುಡಿದಂತೆ ಉಚಿತ ಗ್ಯಾರಂಟಿಗಳನ್ನು ಕೊಡಲಿ. ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಪ್ರತಿಯೊಬ್ಬರಿಗೂ ಕೊಡಬೇಕು. ಗ್ಯಾರಂಟಿಗಳನ್ನು ಕೊಡುವುದಕ್ಕೆ ಶುರು ಮಾಡಿ, ಬೇಕಾದವರು ಅರ್ಜಿ ಹಾಕೋತಾರೆ. ಈ ಸರ್ಕಾರಕ್ಕೆ ಗ್ಯಾರಂಟಿಗಳನ್ನು ಕೊಡೋಕ್ಕೆ ಇಷ್ಟ ಇಲ್ಲ. ಕಳ್ಳನಿಗೆ ಪಿಳ್ಳೆ ನೆವ ಎಂಬಂತೆ ಇವರ ಪರಿಸ್ಥಿತಿ ಆಗಿದೆ ಎಂದು ಕಿಡಿಕಾರಿದರು.
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಮಾತನಾಡಿ, ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ. ಪಕ್ಷ ಯಾರನ್ನೇ ನೇಮಕ ಮಾಡಿದರೂ ನಾವು ಕೆಲಸ ಮಾಡ್ತೇವೆ. ಯಾರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ನಾವು ಒಪ್ಕೋತೇವೆ. ಸಾಕು ಈ ಜಾತಿ ವಿಚಾರ, ನಾವು ಕನ್ನಡಿಗರು, ಕರ್ನಾಟಕದವರು. ಪಕ್ಷದಲ್ಲಿ ಜವಾಬ್ದಾರಿ ನೀಡಿದರೆ ನಿಭಾಯಿಸುತ್ತೇನೆ. ಹಿಂದೆ ಡಿಸಿಎಂ ಸ್ಥಾನವನ್ನು ಬಯಸಿದ್ದಿಲ್ಲ, ನೀಡಿದರು ನಿಭಾಯಿಸಿದೆ ಎಂದು ಹೇಳಿದರು.
Ashwath Narayan slams DK Shivakumar in singular, says what is your connection with Bangalore, what good have you done. There is not a paisa benefit from him he added.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 11:23 pm
HK News Desk
ಆನ್ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಪ್ರತಿಭಟ...
20-05-26 10:33 am
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm