ಬ್ರೇಕಿಂಗ್ ನ್ಯೂಸ್
25-06-23 01:49 pm HK News Desk ಕರ್ನಾಟಕ
ಕಾರವಾರ, ಜೂನ್ 25: ಕಳ್ಳತನ ಪ್ರಕರಣದ ಆರೋಪದಡಿ ವಿಚಾರಣೆಗೆ ಕರೆ ತಂದಿದ್ದ ಕೈದಿಯೋರ್ವ ಪೊಲೀಸ್ ಠಾಣೆಯಲ್ಲಿ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ದಿಲೀಪ ಮಂಡೇಲ್ ಆತ್ಮಹತ್ಯೆಗೆ ಶರಣಾದ ವಿಚಾರಣಾಧೀನ ಕೈದಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಹೊನ್ನಾವರ ಪಟ್ಟಣದ ಸಾಲೆಹಿತ್ತಲ್ ಮನೆಯಲ್ಲಿ ಬಂಗಾರ ಕಳ್ಳತನ ಪ್ರಕರಣ ಪತ್ತೆ ಕಾರ್ಯದಲ್ಲಿರುವಾಗ ಚಿನ್ನಕ್ಕೆ ಹೊಳಪು ನೀಡುತ್ತೇವೆ ಎಂದು ಮೃತ ವ್ಯಕ್ತಿಯು ತಂದೆಯ ಜತೆ ಪಟ್ಟಣದಲ್ಲಿ ವಂಚಿಸಲು ಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರಿಂದ ಬಂದ ದೂರನ್ನು ಆಧರಿಸಿ ವಿಚಾರಣೆಗೆ ಕರೆತರಲಾಗಿತ್ತು. ವಿಚಾರಣೆಯ ಹಂತದಲ್ಲಿರುವಾಗ ಆರೋಪಿತ ನೀರು ಕುಡಿಯುತ್ತೇನೆ ಎಂದು ಬ್ಯಾಗ್ನಲ್ಲಿ ತಂದಿದ್ದ ಸೈನೆಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಐವರು ಪೊಲೀಸರು ಅಮಾನತು:
ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದರು. ನಂತರ ಮಂಗಳೂರು ವಲಯದ ಐಜಿ ಚಂದ್ರಗುಪ್ತ ಸುದೀರ್ಘ ಎರಡು ಗಂಟೆಯ ವಿಚಾರಣೆಯ ಬಳಿಕ ಸಿಪಿಐ ಮಂಜುನಾಥ ಇ.ಒ, ಪಿಎಸ್ಐ ಮಂಜೇಶ್ವರ ಚಂದಾವರ, ಸಿಬ್ಬಂದಿಗಳಾದ ಸಂತೋಷ, ರಮೇಶ ಲಂಬಾಣಿ ಹಾಗೂ ಮಹಾವೀರ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ. ಇಂದು ಮಾಜಿಸ್ಟೇಟ್ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ. ಈ ಪ್ರಕರಣ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಇಂದು ಆಗಮಿಸುವ ಸಾಧ್ಯತೆ ಇದೆ. ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.
Five police personnel have been placed under suspension after a man allegedly committed suicide while in the custody of the Honnavar police. He committed suicide by consuming poison in the police station.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm