ಬ್ರೇಕಿಂಗ್ ನ್ಯೂಸ್
28-06-23 04:57 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ಅನ್ನಭಾಗ್ಯ ಯೋಜನೆಯಡಿ ಹತ್ತು ಕೇಜಿ ಅಕ್ಕಿ ನೀಡುವ ಬದಲಿಗೆ ಹಣ ನೀಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಜು.1ರಿಂದಲೇ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮಾವಣೆ ಮಾಡಲು ನಿರ್ಧರಿಸಲಾಗಿದೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಅಕ್ಕಿ ಕೊರತೆ ಇರುವ ಹಿನ್ನೆಲೆಯಲ್ಲಿ ಹಣ ನೀಡಲು ತೀರ್ಮಾನಿಸಲಾಗಿದೆ. ಒಂದು ಕೆಜಿ ಅಕ್ಕಿ ಬೆಲೆಯನ್ನು 34 ರೂ.ಗೆ ನಿಗದಿಪಡಿಸಿ, ಪ್ರತಿ ಕುಟುಂಬಕ್ಕೆ ಅಗತ್ಯವಿರುವಷ್ಟು ಅಕ್ಕಿಯ ಬದಲಿಗೆ ಹಣ ನೀಡಲಾಗುತ್ತದೆ ಎಂದು ತಿಳಿಸಿದರು.
ಯೋಜನೆ ಲಾಭ ಬಿಪಿಎಲ್ ಕಾರ್ಡುದಾರರಿಗೆ ಮಾತ್ರವೇ ಅನ್ವಯವಾಗುತ್ತದೆ. ಪ್ರತಿ ಕುಟುಂಬಕ್ಕೆ 5 ಕೆಜಿ ಅಕ್ಕಿ ನಿಗದಿಪಡಿಸಿದ್ದು, ಉಳಿದ ಐದು ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿ ಅಕ್ಕಿಗೆ 34 ರೂ.ಗಳಂತೆ ಪ್ರತಿ ಕುಟುಂಬಕ್ಕೆ 170 ರೂ. ನೀಡಲು ತೀರ್ಮಾನಿಸಲಾಗಿದೆ. ಜು. 1ರಿಂದಲೇ ಫಲಾನುಭವಿಗಳಿಗೆ ಈ ಹಣ ಜಮೆ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.
ಎಷ್ಟು ಸದಸ್ಯರ ಕುಟುಂಬಕ್ಕೆ ಎಷ್ಟು ಹಣ ?
ಕುಟುಂಬದ ಒಬ್ಬ ಸದಸ್ಯನಿಗೆ 5 ಕೆಜಿ ಲೆಕ್ಕದಲ್ಲಿ ಇಬ್ಬರು ಸದಸ್ಯರ ಕುಟುಂಬಕ್ಕೆ 10 ಕೆಜಿ, ಐದು ಜನರ ಕುಟುಂಬಕ್ಕೆ 25 ಕೆಜಿ ಅಕ್ಕಿ ನಿಗದಿಪಡಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ. ಅದೇ ಲೆಕ್ಕದಲ್ಲಿ ಕೆಜಿ ಅಕ್ಕಿಗೆ 34 ರೂ.ಗಳಂತೆ, 5 ಕೆಜಿ ಅಕ್ಕಿ ಪಡೆಯುವ ಕುಟುಂಬಕ್ಕೆ 170 ರೂ., 10 ಕೆಜಿ ಅಕ್ಕಿಯನ್ನು ಪಡೆಯುವ ಕುಟುಂಬಕ್ಕೆ 340 ರೂ. ಹಾಗೂ 25 ಕೆಜಿ ಅಕ್ಕಿಯನ್ನು ಪಡೆಯುವ ಕುಟುಂಬಕ್ಕೆ 850 ರೂ. ನೀಡಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಬಿಪಿಎಲ್ ಕುಟುಂಬದ ಯಜಮಾನಿ ಖಾತೆಗೆ ಹಣ
ಪ್ರತಿ ಬಿಪಿಎಲ್ ಕುಟುಂಬದ ಕಾರ್ಡ್ ಗಳಲ್ಲಿ ಮನೆಯ ಯಜಮಾನಿ ಯಾರು ಎಂದು ನಮೂದಾಗಿರುತ್ತದೋ ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ. ಪ್ರತಿ ಬಿಪಿಎಲ್ ಕಾರ್ಡುದಾರರ ಮಾಹಿತಿ ನಮ್ಮ (ಸರ್ಕಾರ) ಬಳಿಯಿದೆ. ಆ ಕಾರ್ಡ್ ಗಳಲ್ಲಿ ಪ್ರಮುಖವಾಗಿ ಉಲ್ಲೇಖವಾಗಿರುವವರ ಹೆಸರು, ಅವರ ಬ್ಯಾಂಕ್ ಖಾತೆಗಳ ವಿವರಗಳು ಸರ್ಕಾರದ ಬಳಿಯಿವೆ. ಅದರ ಆಧಾರದಲ್ಲಿ ಹಣ ಜಮೆ ಮಾಡುತ್ತದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.
The Karnataka government has decided to give cash instead of rice till rice is procured. For each Kg Rs. 34 will be given until rice is procured and supplied, says Minister HK Patil
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm