ಬ್ರೇಕಿಂಗ್ ನ್ಯೂಸ್
28-06-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 28: ಕಾಂಗ್ರೆಸ್ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಪುನರ್ ತನಿಖೆ ಮಾಡಲಿದೆ ಎಂಬ ವರದಿಗಳ ನಡುವೆಯೇ, ಕಾಂಗ್ರೆಸ್ ರಾಜ್ಯ ಘಟಕ ಬಿಜೆಪಿ ವಿರುದ್ಧ ಟ್ವೀಟ್ ಮಾಡಿದೆ. ಬಿಟ್ ಕಾಯಿನ್ ಹಗರಣದ ತನಿಖೆ ಮಾಡಲಾಗುತ್ತೆ ಎನ್ನುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಕಟಕಿಯಾಡಿದೆ.
ಬಿಟ್ ಕಾಯಿನ್ ಹಗರಣ ಬಯಲಿಗೆ ಬಂದಾಗ ಅಂದಿನ ಬಿಜೆಪಿ ಸರ್ಕಾರ ಪ್ರಕರಣ ಮುಚ್ಚಿ ಹಾಕಲು ಸರ್ವ ಪ್ರಯತ್ನ ಮಾಡಿತ್ತು. ಹಗರಣ ಮುಚ್ಚಿ ಹಾಕಲು ಯಶಸ್ವಿಯೂ ಆಗಿತ್ತು. ಈಗ ನಮ್ಮ ಸರ್ಕಾರ ಬಿಟ್ ಕಾಯಿನ್ ಹಗರಣದ ಬುಡ, ಬೇರುಗಳನ್ನು ಜಾಲಾಡಲಿದೆ. ಅಂದಹಾಗೆ, ನಳಿನ್ ಕಟೀಲ್ ಅವರು ಕುಳಿತಲ್ಲಿಯೇ ಬೆವರುತ್ತಿದ್ದಾರಂತೆ, ಏಕಿರಬಹುದು ಎಂದು ಪ್ರಶ್ನೆ ಮಾಡಿದೆ.

ಹಗರಣದಲ್ಲಿ ನಳಿನ್ ಕುಮಾರ್ ಕಟೀಲ್ ಶಾಮೀಲಾತಿ ಇದೆಯೆಂದು ಈ ಹಿಂದೆ ಕಾಂಗ್ರೆಸ್ ರಾಜ್ಯ ವಕ್ತಾರ ಕೆ.ಲಕ್ಷ್ಮಣ್ ಆರೋಪ ಮಾಡಿದ್ದರು. ಎರಡು ವರ್ಷಗಳ ಹಿಂದೆ ಪ್ರಕರಣದ ತನಿಖೆ ಹಳ್ಳ ಹಿಡಿದಾಗ ಈ ಪ್ರಶ್ನೆ ಮಾಡಿದ್ದರು. ಆದರೆ ತನಿಖೆಯನ್ನು ಸಿಐಡಿ ತಂಡ ಅರ್ಧಕ್ಕೆ ಸ್ಥಗಿತಗೊಳಿಸಿತ್ತು. ಪ್ರಕರಣದ ಬಗ್ಗೆ ಚಾರ್ಜ್ ಶೀಟನ್ನೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿರಲಿಲ್ಲ. ಆನಂತರ, ಚುನಾವಣೆ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ ಬಿಟ್ ಕಾಯಿನ್ ಹಗರಣವನ್ನು ತನಿಖೆ ಮಾಡುತ್ತೇವೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದರು. ಇದೀಗ ಹಿಂದಿನ ಸರ್ಕಾರದ ಎಲ್ಲ ಹಗರಣಗಳನ್ನೂ ತನಿಖೆ ಮಾಡುತ್ತೇವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮರು ತನಿಖೆಗೆ ಬೆಂಗಳೂರು ಕಮಿಷನರ್ ಡಿಜಿಪಿಗೆ ಪತ್ರ ಬರೆದಿದ್ದು ಸಿಐಡಿ ಅಥವಾ ಎಸ್ಐಟಿ ತಂಡದಿಂದ ತನಿಖೆ ನಡೆಯೋದು ಖಾತ್ರಿಯಾಗಿದೆ.
Re investigation of Bitcoin scam, Nalin Kateel is sweating, mocks Congress on Twitter. The Congress government in Karnataka on Tuesday said it will get the Bitcoin scam taken place during the previous BJP government thoroughly investigated
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
15-02-26 04:01 pm
HK Desk
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
15-02-26 08:52 pm
Mangalore Correspondent
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
Lotus Builder Jitendra Kottary, FIR: ಗನ್ ಹಿಡಿ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
15-02-26 05:08 pm
Mangaluru Staffer
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am