ಯಲ್ಲಾಪುರ ; ಮದುವೆಗೆ ಹೆಣ್ಣು ಸಿಕ್ಕಿಲ್ಲವೆಂದು ಯುವಕ ಸಾವಿಗೆ ಶರಣು 

29-06-23 01:08 pm       HK News Desk   ಕರ್ನಾಟಕ

ಮದುವೆಯಾಗಲು ಹೆಣ್ಣು ಸಿಗ್ತಿಲ್ಲ ಎಂಬ ಕೊರಗಿನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. 

ಕಾರವಾರ, ಜೂನ್ 29: ಮದುವೆಯಾಗಲು ಹೆಣ್ಣು ಸಿಗ್ತಿಲ್ಲ ಎಂಬ ಕೊರಗಿನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. 

ನಾಗರಾಜ ಗಣಪತಿ ಗಾಂವ್ಕರ್ (35) ಮೃತ ಯುವಕ. ಯಲ್ಲಾಪುರ ತಾಲೂಕಿನ ತೇಲಂಗಾರ ಕಿರಗಾರಿಮನೆ ನಿವಾಸಿ. ಕೃಷಿ ಕೆಲಸ ಮಾಡಿಕೊಂಡಿದ್ದ ನಾಗರಾಜ್ ಮದುವೆಯಾಗಲು ಹೆಣ್ಣು ಹುಡುಕುತ್ತಿದ್ದ. ಹಲವು ಸಮಯದಿಂದ ಹುಡುಕಾಟ ನಡೆಸಿದರೂ, ಏನಾದರೊಂದು ನೆಪದಲ್ಲಿ ಹೆಣ್ಣು ಸೆಟ್ ಆಗುತ್ತಿರಲಿಲ್ಲ. 

ಸಂಬಂಧಿಕರು, ಬ್ರೋಕರ್ ಗಳ ಬಳಿಯೂ ಹೆಣ್ಣು ಹುಡುಕಲು ಹೇಳುತ್ತಿದ್ದ. ಎಲ್ಲಿಯೂ ಹೆಣ್ಣು ಸಿಗದೇ ಇದ್ದುದರಿಂದ ಖಿನ್ನನಾಗಿದ್ದ. ಅದೇ ಖಿನ್ನತೆಯಲ್ಲಿ ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿದ್ದಾರೆ.

Yellapur 35 old year old man Commits suicide as unable to find girl for marriage. The deceased has been identified as Ganapathi (35).