ಬ್ರೇಕಿಂಗ್ ನ್ಯೂಸ್
29-06-23 09:22 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 29: ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಡಿಯೋ ಬಿಟ್ರಲ್ಲಾ.. ಜಗದೀಶ್ ಶೆಟ್ಟರ್, ಈಶ್ವರಪ್ಪ ಎಲ್ರನ್ನೂ ತೆಗಿಯೋದು ಅಂತ. ಹಾಗೇ ಮಾಡಿದ್ರಲ್ಲಾ.. ಎಲ್ಲರನ್ನೂ ಮುಗಿಸಿ ಬಿಟ್ಟರು. ಅಧಿಕಾರದಲ್ಲಿದ್ದಾಗಲೇ ಆಡಿಯೋ ಬಿಟ್ಟಿದ್ದರು ಎಂದು ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬಗ್ಗೆ ಮಾಜಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ಮಾಡಿದ್ದಾರೆ.
ಹೊನ್ನಾಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಬಿಜೆಪಿ ಸೋಲಲು ಕೆಲವರ ತಪ್ಪು ನಿರ್ಧಾರಗಳೇ ಕಾರಣ. ಹಿರಿಯರನ್ನು ಬಿಟ್ಟು ಸುಧಾಕರ್ ಗೆ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮಾಡಿದ್ರು. ಯಾವ ಅರ್ಹತೆಯಿದೆಯೆಂದು ಮಾಡಿದ್ದರು. ಕೆಲವು ನಾಯಕರ ಧೋರಣೆಗಳು, ಕಾಂಗ್ರೆಸಿನ ಬಿಟ್ಟಿ ಭಾಗ್ಯಗಳಿಂದಾಗಿ ಪಕ್ಷಕ್ಕೆ ಹೀನಾಯ ಸೋಲಾಗಿದೆ ಎಂದು ಹೇಳಿದರು.
ಯಡಿಯೂರಪ್ಪ ಏನು ನಡೆಯೋಕೆ ಆಗದ ಸ್ಥಿತಿಗೆ ತಲುಪಿದ್ದಾರೆಯೇ.. ಅವರನ್ನು ಯಾಕೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದರು. ಅವರನ್ನು ಮುಖ್ಯಮಂತ್ರಿಯಾಗಿದ್ದಾಗಲೂ ಮೂವರು ಡಿಸಿಎಂ ಮಾಡಿ, ಅಧಿಕಾರ ಚಲಾಯಿಸದಂತೆ ಕಟ್ಟಿ ಹಾಕಿದ್ದರು. ರಾಜ್ಯದಲ್ಲಿ ಲಿಂಗಾಯತ, ವೀರಶೈವ, ದಲಿತ, ಒಂದಷ್ಟು ಹಿಂದುಳಿದ ವರ್ಗದ ಮತಗಳಿರುವುದು. ಇವರನ್ನು ಬಿಟ್ಟು ಏನೇ ಮಾಡಿದ್ರೂ ಗೆಲ್ಲೋಕೆ ಸಾಧ್ಯವಿಲ್ಲ. ಇದು ಗುಜರಾತ್, ಉತ್ತರ ಪ್ರದೇಶ ಅಲ್ಲ ಎಂದಿದ್ದಾರೆ.
ಮೋದಿಯವರು ವಿಶ್ವನಾಯಕ. ಅವರ ಬಗ್ಗೆ ಅಪಾರ ಗೌರವ ಇದೆ. ಅಮಿತ್ ಷಾ ಬಗ್ಗೆಯೂ ಗೌರವ ಇದೆ ಎಂದು ಹೇಳಿದ ಅವರನ್ನು ನಿಮ್ಮ ಮೇಲೆ ಪಕ್ಷದಿಂದ ನೋಟೀಸ್ ಕಳಿಸುವ ಸಾಧ್ಯತೆ ಇದೆ ಎಂದು ಕೇಳಿದ್ದಕ್ಕೆ, ನೋಟೀಸ್ ಕೊಡಲಿಯಪ್ಪಾ.. ಇವರು ಅಧಿಕಾರದಲ್ಲಿದ್ದಾಗಲೇ ಪಕ್ಷದ ವಿರುದ್ಧ ಹೇಳಿಕೆ ಕೊಟ್ಟವರಿಗೆ ಏನು ಮಾಡಿದ್ದರು. ಅಧಿಕಾರ ಇದ್ದಾಗಲೇ ಏನೂ ಮಾಡೋಕೆ ಆಗಿಲ್ಲ. ಈಗ ನೋಟೀಸ್ ಕೊಟ್ಟು ಏನು ಮಾಡಕ್ಕಾಗುತ್ತೆ ಎಂದರು.
ನೀವು ಕಾಂಗ್ರೆಸ್ ಹೋಗುತ್ತೀರಾ ಎಂಬ ಪ್ರಶ್ನೆಗೆ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಯಾಕೆ ಕಾಂಗ್ರೆಸ್ ಹೋಗಬೇಕು. ಡಿಕೆಶಿ, ಸಿದ್ದರಾಮಯ್ಯ ಜೊತೆಗೆ ಸಂಪರ್ಕ ಹೊಂದಿದ್ದೇನೆಂದು ಕಾಂಗ್ರೆಸಿಗೆ ಹೋಗುತ್ತೇನೆಂದು ಅರ್ಥ ಮಾಡ್ಕೊಬೇಕಿಲ್ಲ. ನನಗೆ ಮೊದಲಿನಿಂದಲೂ ರಾಜಕೀಯ ಮೀರಿದ ಸ್ನೇಹ ಇದೆ. ಹೊನ್ನಾಳಿಗೆ ಎರಡು ಬಾರಿ ಸಿದ್ದರಾಮಯ್ಯ ಅವರನ್ನು ಕರೆಸಿಕೊಂಡಿದ್ದೇನೆ. ಡಿಕೆಶಿ ಜೊತೆಗೆ ಆಪ್ತವಾಗಿ ಮಾತನಾಡಿದ್ದೂ ಇದೆ. ಮೊನ್ನೆ ಚುನಾವಣೆ ಬಳಿಕ ಶಾಮನೂರು ಅವರ ಜೊತೆಗೂ ಮಾತನಾಡಿದ್ದೆ. ಹಾಗಂತ, ನಾನು ಕಾಂಗ್ರೆಸ್ ಹೋಗುತ್ತೇನೆಂದು ಅರ್ಥ ಅಲ್ಲ ಎಂದರು. ಸಂಸದ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ, ಸಂಸತ್ ಟಿಕೆಟ್ ಪಡೆಯಲು ಪಕ್ಷದಿಂದ ಕೇಳಿದ್ದೇನೆ. ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ ಎಂದರು. ಕಾಂಗ್ರೆಸಿನಿಂದಲಾ ಎಂಬ ಪ್ರಶ್ನೆಗೆ, ಯಾಕೆ ಹಾಗಂತೀರಿ, ನಾನು ಬಿಜೆಪಿ ಟಿಕೆಟ್ ಕೇಳಿದ್ದು ಎಂದು ಮರು ಪ್ರಶ್ನೆ ಹಾಕಿದರು.
ರೇಣುಕಾಗೆ ಶಿಸ್ತು ಸಮಿತಿ ನೋಟೀಸ್
ಮಧ್ಯಾಹ್ನ ಹೊನ್ನಾಳಿಯಲ್ಲಿ ಪಕ್ಷದ ನಾಯಕರ ಬಗ್ಗೆ ಟೀಕಿಸಿದ್ದ ರೇಣುಕಾಚಾರ್ಯ ವಿರುದ್ಧ ರಾಜ್ಯ ಬಿಜೆಪಿ ನೋಟೀಸ್ ಜಾರಿ ಮಾಡಿದೆ. ಪಕ್ಷದ ಶಿಸ್ತು ಸಮಿತಿಯ ಲಿಂಗರಾಜ್ ಪಾಟೀಲ್ ನೋಟೀಸ್ ನೀಡಿ, ನಿಮ್ಮ ವಿರುದ್ಧ ಯಾಕೆ ಶಿಸ್ತು ಕ್ರಮ ಜರುಗಿಸಬಾರದು. ಈ ಬಗ್ಗೆ ಹತ್ತು ದಿನದ ಒಳಗೆ ಲಿಖಿತ ಉತ್ತರ ನೀಡಬೇಕು ಎಂದು ತಿಳಿಸಿದ್ದಾರೆ. ಆದರೆ ನೋಟೀಸ್ ಬೆನ್ನಲ್ಲೇ ರಾಜ್ಯದ ಹಲವು ಕಡೆಯಿಂದ ವಿರೋಧವೂ ಕೇಳಿಬಂದಿದೆ. ಬಿಎಸ್ವೈ ಫ್ಯಾನ್ಸ್ ಸೇರಿದಂತೆ ಬಿಜೆಪಿ ಕಾರ್ಯಕರ್ತರೇ ಜಾಲತಾಣದಲ್ಲಿ ನೋಟೀಸ್ ಬಗ್ಗೆ ಕಿಡಿಕಾರಿದ್ದಾರೆ. ವರ್ಷಾನುಗಟ್ಟಲೆ ಪಕ್ಷದ ವಿರುದ್ಧ ಟೀಕೆ ಮಾಡಿದ್ದ ಯತ್ನಾಳ್ ಮೇಲೆ ನೋಟೀಸ್ ನೀಡದವರು ಈಗ ರೇಣುಕಾ ಮೇಲೆ ಯಾಕೆ ನೋಟೀಸ್ ನೀಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.
The BJP on Thursday issued a show-cause notice to former minister MP Renukacharya after he criticised the party's leadership and even called for state president Nalin Kumar Kateel's resignation for the Assembly poll debacle.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm