Hospet Accident: ಹೊಸಪೇಟೆ ; ಆಟೋಗಳಿಗೆ ಲಾರಿ ಡಿಕ್ಕಿ- ಏಳು ಮಂದಿ ಸಾವು, ಜಲಾಶಯ ನೋಡಲು ಹೋಗುತ್ತಿದ್ದವರು ಮಸಣಕ್ಕೆ 

30-06-23 06:20 pm       HK News Desk   ಕರ್ನಾಟಕ

ಹೊಸಪೇಟೆ ಬಳಿಯಿರುವ ತುಂಗಭದ್ರಾ ಜಲಾಶಯ ನೋಡಲು ತೆರಳುತ್ತಿದ್ದ ಎರಡು ಆಟೋಗಳಿಗೆ ಲಾರಿ ಡಿಕ್ಕಿಯಾಗಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ.

ಬಳ್ಳಾರಿ, ಜೂನ್ 30: ಹೊಸಪೇಟೆ ಬಳಿಯಿರುವ ತುಂಗಭದ್ರಾ ಜಲಾಶಯ ನೋಡಲು ತೆರಳುತ್ತಿದ್ದ ಎರಡು ಆಟೋಗಳಿಗೆ ಲಾರಿ ಡಿಕ್ಕಿಯಾಗಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ.  

ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಈ ಅಪಘಾತ ನಡೆದಿದೆ. ಎರಡು ಆಟೋ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದ್ದು, ಒಂದು ಆಟೋ ಡಿಕ್ಕಿಯ ರಭಸಕ್ಕೆ ಹಲವು ಮೀಟರ್ ದೂರ ಹೋಗಿ ಬಿದ್ದಿದೆ. ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನಾ ಸ್ಥಳಕ್ಕೆ ಹೊಸಪೇಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತಕ್ಕೀಡಾದ ಎರಡು ಆಟೋಗಳ ಪೈಕಿ ಒಂದು ಬಳ್ಳಾರಿಯಿಂದ ಹೊಸಪೇಟೆಗೆ ಹೊರಟಿತ್ತು. ಒಂದೇ ಆಟೋದಲ್ಲಿ 20 ಜನರಿದ್ದರು ಎನ್ನಲಾಗಿದೆ. ಮತ್ತೊಂದು ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಕೆಲವು ಗಾಯಾಳುಗಳನ್ನು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ತೀವ್ರವಾಗಿ ಗಾಯಗೊಂಡವರನ್ನು ಬಳ್ಳಾರಿಯ ವಿಮ್ಸ್‌ಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

Seven people were killed after a truck and two auto cargo autos collided on Friday at Vaddarahalli Bridge of Hospet taluk in Vijayanagara district. The victims who are residents of Ballari were travelling to Tungabhadra Dam near Hospet in two autos when the accident occurred.