ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm