ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm