ಬ್ರೇಕಿಂಗ್ ನ್ಯೂಸ್
01-07-23 02:56 pm HK News Desk ಕರ್ನಾಟಕ
ಬೆಂಗಳೂರು, ಜುಲೈ 1: ಬಿಜೆಪಿ ಶಿಸ್ತು ಸಮಿತಿಯ ನೋಟಿಸ್ ಬೆನ್ನಲ್ಲೇ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ರೇಣುಕಾಚಾರ್ಯ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ. ನಾನು ಪಕ್ಷಕ್ಕೆ ಏನು ಮಾಡಿಲ್ಲವಾ? ನನಗೆ ಸಿಟ್ಟು ಇತ್ತು. ಹಾಗಾಗಿ ಬಹಿರಂಗವಾಗಿ ಹೇಳಿದ್ದೇನೆ. ಶಿಸ್ತು ಸಮಿತಿ ನನಗೆ ಮಾತ್ರ ನೋಟಿಸ್ ನೀಡಿದ್ಯಾಕೆ? ಪಕ್ಷದಲ್ಲಿ ಶಿಸ್ತು ಸಮಿತಿ ಇದೆ ಅನ್ನೋದೇ ನಿನ್ನೆ ಗೊತ್ತಾಗಿದೆ ಎಂದು ಬಿಎಸ್ವೈ ಮುಂದೆ ರೇಣುಕಾಚಾರ್ಯ ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ರೇಣುಕಾಚಾರ್ಯ, ಬಿಎಸ್ವೈ ಅಂಥವರನ್ನ ಷಡ್ಯಂತ್ರ ಮಾಡಿ ಎರಡು ಬಾರಿ ಅಧಿಕಾರದಿಂದ ಕೆಳಕ್ಕಿಳಿಸಿದ್ರು. ಕಾಂಗ್ರೆಸ್ - ಜೆಡಿಎಸ್ನವರು ಯಡಿಯೂರಪ್ಪ, ಮೋದಿ ನೋಡಿ ಬಂದಿದ್ದರು. ಅವರನ್ನ ಉಪ ಚುನಾವಣೆಗಳಲ್ಲಿ ನಿಲ್ಲಿಸಿ ಗೆಲ್ಲಿಸಿದ್ದು ಯಡಿಯೂರಪ್ಪ. ಅಂತಹ ನಾಯಕರ ವಿರುದ್ಧ ಮಾತಾಡಿದವರಿಗೆ ಪಕ್ಷ ನೋಟಿಸ್ ನೀಡಿಲ್ಲ ಯಾಕೆ ಎಂದು ಗುಡುಗಿದರು.
ಯಡಿಯೂರಪ್ಪ ನಮ್ಮ ನಾಯಕರು, ಗೌರವ ಕೊಡ್ತೀನಿ. ಗನ್ ಇಟ್ಟು ಯಡಿಯೂರಪ್ಪ ಹೇಳಿಸಿದ್ದಾರೆ ಅಂತಾ ಮಾತಾಡ್ತಾರೆ. ಅಂಥ ಕೀಳುಮಟ್ಟಕ್ಕೆ ಯಡಿಯೂರಪ್ಪ ಹೋಗಿಲ್ಲ. ಪಕ್ಷ ಹೀನಾಯ ಸ್ಥಿತಿಗೆ ಬಂದಿರೋದಕ್ಕೆ ಬಿಎಸ್ವೈ ಅವರಿಗೂ ನೋವಿದೆ ಎಂದು ತಿಳಿಸಿದರು. ಅವಮಾನ, ಅಪಮಾನ ಮಾಡಿದರೂ ಪಾಪ ಗೌರವದಿಂದ ಯಡಿಯೂರಪ್ಪವರು ರಾಜೀನಾಮೆ ನೀಡಿದರು. ಅಲ್ಲಿಂದ ನಿರಂತರವಾಗಿ ಅವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಆರೋಪ ಮಾಡಿದರು.
Renukacharya meets Yediyurappa after BJP notice to Renukacharya for ‘anti-party’ statements within hours.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
22-08-25 10:00 pm
HK News Desk
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
ಮಹಾ ಸಿಎಂ ದೇವೇಂದ್ರ ಫಡ್ನವೀಸ್ - ಎಂಎನ್ಎಸ್ ಮುಖ್ಯಸ್...
21-08-25 06:09 pm
23-08-25 01:29 pm
Udupi Correspondent
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
Vhp, Mangalore, Sharan Pumpwell: ಗಣೇಶೋತ್ಸವ, ದ...
21-08-25 09:12 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm