ಬ್ರೇಕಿಂಗ್ ನ್ಯೂಸ್
01-07-23 04:57 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 1: ವಿಧಾನಸಭೆ ಚುನಾವಣೆ ನಡೆದು ಎರಡು ತಿಂಗಳು ಕಳೆದರೂ, ವಿರೋಧ ಪಕ್ಷದ ನಾಯಕನ ಆಯ್ಕೆ ಬಿಜೆಪಿ ಪಾಲಿಗೆ ಕಗ್ಗಂಟಾಗಿ ಉಳಿದಿದೆ. ಹೀಗಾಗಿ, ‘ಕರ್ನಾಟಕ ವಿಧಾನಸಭೆಗೆ ವಿರೋಧ ಪಕ್ಷದ ನಾಯಕ ತುರ್ತಾಗಿ ಬೇಕಾಗಿದ್ದಾರೆ’ ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಯನ್ನು ಲೇವಡಿ ಮಾಡಿದೆ.
ಶನಿವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಟ್ವಿಟರ್ನಲ್ಲಿ ಜಾಹೀರಾತು ರೂಪದ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಖಾಲಿ ಇರುವ ಕರ್ನಾಟಕದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಹುದ್ದೆಗೆ ಸೂಕ್ತ ವ್ಯಕ್ತಿ ಬೇಕಾಗಿದ್ದಾರೆ ಎಂದು ಪೋಸ್ಟರ್ನಲ್ಲಿ ಬರೆಯಲಾಗಿದೆ.
ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ. ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಕಟಕಿಯಾಡಿದೆ.
ಅಲ್ಲದೆ, ಆರ್ಎಸ್ಎಸ್ ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು. ಘನತೆಯ ವ್ಯಕ್ತಿತ್ವದವರು, ತೂಕದ ಮಾತಿರುವ ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ! ಎಂದು ಟ್ವೀಟ್ ಮಾಡಿ ಬಿಜೆಪಿ ನಾಯಕರನ್ನು ಚುಚ್ಚಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದು ಟೀಕಿಸಿದೆ.
👉ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ
— Karnataka Congress (@INCKarnataka) July 1, 2023
🔹ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.
🔹ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.
🔹ವಾಟ್ಸಾಪ್… pic.twitter.com/z0bzup2HGU
Urgent vacancy for opposition leader in Karnataka, Congress Slams BJP on Twitter handle.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm