ಬ್ರೇಕಿಂಗ್ ನ್ಯೂಸ್
01-07-23 10:39 pm HK News Desk ಕರ್ನಾಟಕ
ಹುಬ್ಬಳ್ಳಿ, ಜುಲೈ 1: ಇಡೀ ಬಿಜೆಪಿ ಒಬ್ಬರ ಪಂಚೆಯಲ್ಲಿ ಬಂಧಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದ್ದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇದು ಕಾಂಗ್ರೆಸ್ನ ಕೆಳಮಟ್ಟದ ಭಾಷೆ. ಈ ವಿಚಾರಕ್ಕೆ ನಮ್ಮ ಪಕ್ಷದ ಬೇರೆ ಬೇರೆಯವರು ಮಾತಾಡಿದ್ದಾರೆ. ಭಾರತ ಸರ್ಕಾರದ ಮಂತ್ರಿಯಾಗಿ ನಾನು ಆ ಪದ ಬಳಸಲ್ಲ. ಸಿಎಂ ಸಿದ್ದರಾಮಯ್ಯ ಲುಂಗಿ ಲೀಡರ್. ಅವರು ಅದನ್ನು ಮರೆಯಬಾರದು ಎಂದಿದ್ದಾರೆ.
ಅಸಭ್ಯ ಪದ ಬಳಸುವುದು ಸರಿಯಲ್ಲ. ಅಪ್ಪಿ ತಪ್ಪಿಯೂ ನನ್ನ ಬಾಯಿಂದ ಅಂತಹ ಭಾಷೆ ಬರುವುದಿಲ್ಲ. ಅದಕ್ಕೆಲ್ಲಾ ಜನರು ಮುಂದೆ ಉತ್ತರ ಕೊಡುತ್ತಾರೆ ಎಂದು ಹೇಳಿದರು. ವಿಪಕ್ಷ ನಾಯಕನ ಪ್ರಶ್ನೆಗೆ, ಎರಡು - ಮೂರು ದಿನಗಳಲ್ಲಿ ವಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದು ಜೋಶಿ ಸ್ಪಷ್ಟಪಡಿಸಿದರು.
ಬಸ್ನಲ್ಲಿ ಮಹಿಳೆಯರು ಉಚಿತ ಅನ್ನೋದು ಬಿಟ್ರೆ ಉಳಿದ ಎಲ್ಲ ಗ್ಯಾರಂಟಿ ಜಾರಿಯಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಅಕ್ಕಿ ಕೊಡುತ್ತಿರೋದು ಪ್ರಧಾನಿ ಮೋದಿ. ದೇಶದ 80 ಕೋಟಿ ಜನರಿಗೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡ್ತಿದೀವಿ. ದೇಶದಲ್ಲಿ ಬರಗಾಲ ಆವರಿಸಿದೆ. ರಾಜ್ಯದಲ್ಲಿಯೂ ಆವರಿಸಿ ಭತ್ತದಲ್ಲಿ ಕಡಿತ ಆಗಬಹುದು ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ, ಸ್ವಲ್ಪ ಪ್ರಮಾಣದ ಅಕ್ಕಿ ಕೇಂದ್ರ ಸರ್ಕಾರದ ಕಡೆ ಇದೆ ಎಂದರು.
ಕಾಂಗ್ರೆಸ್ನವರು 10 ಕೆಜಿ ಅಕ್ಕಿ ಉಚಿತ ಘೋಷಣೆ ಮಾಡಿ ಭಾಷಣ ಮಾಡಿದರು. ಆಗ ಭಾರತ ಸರ್ಕಾರದ ಹೆಸರು ಹೇಳಲಿಲ್ಲ. ಈಗ ಅಕ್ಕಿ ಕೊಡುತ್ತಿಲ್ಲ ಎಂದು ದೂರುತ್ತಿದ್ದಾರೆ. ಜನ ಈಗಾಗಲೇ ಭ್ರಮ ನಿರಶನಗೊಂಡಿದ್ದಾರೆ. ಯುವನಿಧಿ ಯೋಜನೆಯಲ್ಲಿ ಎಲ್ಲ ನಿರುದ್ಯೋಗಿಗಳಿಗೆ ದುಡ್ಡು ಎಂದಿದ್ದರು. ಇವಾಗ ಸಾಕಷ್ಟು ನಿಯಮ ಹಾಕಿದ್ದೀರಾ. ಕಾಂಗ್ರೆಸ್ ಎಲ್ಲ ವಿಷಯದಲ್ಲಿಯೂ ಸುಳ್ಳು ಹೇಳುತ್ತಿದಾರೆ ಎಂದು ಆರೋಪಿಸಿದರು.
Union Minister Pralhad Joshi quipped that both the Congress government and its intelligence have been hacked. Talking to the reporters in Hubballi, he said that Congress has failed in all other issues except the issue of free allowance for women in buses. Modi is giving rice. But some say that UPA made this law. They did not make any legal rules. After BJP came to power, we implemented laws and made rules.
11-02-25 11:12 pm
Bangalore Correspondent
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
NAACbribery case: ನ್ಯಾಕ್ ಮಾನ್ಯತೆಗಾಗಿ ಭ್ರಷ್ಟಾಚ...
11-02-25 02:21 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
11-02-25 06:41 pm
HK News Desk
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm